alex Certify ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಸರ್ಕಾರದಿಂದ ಲೋಪ; ಕಿಮ್ಮನೆ ರತ್ನಾಕರ್ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಸರ್ಕಾರದಿಂದ ಲೋಪ; ಕಿಮ್ಮನೆ ರತ್ನಾಕರ್ ಆರೋಪ

ಶಿವಮೊಗ್ಗ: ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಸರ್ಕಾರ ಅನೇಕ ಲೋಪಗಳನ್ನು ಎಸಗಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದರು.

ನಗರದ ಕುವೆಂಪು ರಂಗಮಂದಿರದಲ್ಲಿ ಎನ್.ಎಸ್.ಯು.ಐ. ಜಿಲ್ಲಾ ಘಟಕದ ವತಿಯಿಂದ ಶನಿವಾರ ಆಯೋಜಿಸಿದ್ದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನೋಟ್ ಬುಕ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಸ್ತುತ ಪಠ್ಯ ಕ್ರಮ ವಿಚಾರ ಎಲ್ಲ ಕಡೆ ಚರ್ಚಿತವಾಗಿದ್ದು, ನಾನು ಶಿಕ್ಷಣ ಸಚಿವ ಆಗಿದ್ದ ಸಂದರ್ಭದಲ್ಲಿ ಅತ್ಯಂತ ವ್ಯವಸ್ಥಿತವಾಗಿ ಪಠ್ಯಕ್ರಮ ಪರಿಷ್ಕರಣೆ ವಿಚಾರ ನಿರ್ವಹಿಸಲಾಗಿತ್ತು. ಆದರೆ ಈಗಿನ ಸರ್ಕಾರ ಮನಸ್ಸಿಗೆ ಬಂದಂತೆ ವರ್ತಿಸುತ್ತಿದ್ದು, ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಸರ್ಕಾರ ಅನೇಕ ಲೋಪಗಳನ್ನು ಎಸಗಿದೆ. ಇಂತಹ ಮಹತ್ತರ ವಿಚಾರಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿ ಧ್ವನಿ ಎತ್ತುವ ಕೆಲಸವನ್ನು ಎನ್.ಎಸ್.ಯು.ಐ. ಮಾಡಬೇಕು ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...