alex Certify ಪವಾಡಸದೃಶ್ಯವಾಗಿ ಅಪಾಯದಿಂದ ಯುವಕ ಪಾರು…! ಎದೆ ಝಲ್ಲೆನ್ನಿಸುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪವಾಡಸದೃಶ್ಯವಾಗಿ ಅಪಾಯದಿಂದ ಯುವಕ ಪಾರು…! ಎದೆ ಝಲ್ಲೆನ್ನಿಸುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಮಂಗಳೂರು: ವೇಗವಾಗಿ ಬರುತ್ತಿದ್ದ ಸ್ಕೂಟರ್ ಸವಾರನೊಬ್ಬ, ಯು-ಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆಯುವುದನ್ನು ಸ್ವಲ್ಪದರಲ್ಲೇ ತಪ್ಪಿಸಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಂಗಳೂರಿನ ಎಲ್ಯಾರುಪದವಿನಲ್ಲಿ ಈ ಘಟನೆ ಸಂಭವಿಸಿದೆ.

ಘಟನೆಯ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಜಾಗರೂಕತೆಯಿಂದ ಸ್ಕೂಟರ್ ಚಾಲನೆ ಮಾಡಿದ ಯುವಕನ ದೃಶ್ಯಾವಳಿ ನೋಡಿದ ಜನ ದಿಗ್ಭ್ರಮೆಗೊಂಡಿದ್ದಾರೆ. ಅತ್ಯಂತ ವೇಗವಾಗಿ ಸ್ಕೂಟಿ ಚಲಾಯಿಸುತ್ತಿದ್ದ ವ್ಯಕ್ತಿ ಬಸ್‌ಗೆ ಡಿಕ್ಕಿಯಾಗುವುದನ್ನು ತಪ್ಪಿಸಿ ಕಾರ್ಖಾನೆಯ ಗೇಟ್‌ಗೆ ಡಿಕ್ಕಿ ಹೊಡೆದರೂ, ಅಂಗಡಿ ಮತ್ತು ಮರವೊಂದರ ನಡುವೆ ಇದ್ದ ಅಲ್ಪ ಅಂತರವನ್ನು ಹೇಗೋ ದಾಟಿ ಸ್ವಲ್ಪದರಲ್ಲೇ ಬಚಾವಾಗಿದ್ದಾನೆ. ಆದರೂ ಕೂಡ ಎಲ್ಲೂ ನಿಲ್ಲಿಸದೆ ವೇಗವಾಗಿಯೇ ಮುಂದೆ ಸಾಗಿದ್ದಾನೆ.

ಘಟನೆಯ ಸಿಸಿ ಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಖಾಸಗಿ ಬಸ್ ಯು-ಟರ್ನ್ ತೆಗೆದುಕೊಳ್ಳುತ್ತಿರುವುದನ್ನು ನೋಡಬಹುದು. ಈ ವೇಳೆ ಹಿಂದಿನಿಂದ ಬಂದ ಸ್ಕೂಟರ್‌ ಅತಿವೇಗದಲ್ಲಿ ಬಸ್ಸನ್ನು ಸಮೀಪಿಸುತ್ತಿರುವುದನ್ನು ನೋಡಬಹುದು. ಬಸ್ ನಿಧಾನವಾಗಿ ಯು-ಟರ್ನ್ ತೆಗೆದುಕೊಳ್ಳುವಾಗ ಪವಾಡಸದೃಶವಾಗಿ ಬಸ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಿದ್ದಾನೆ.

ನಂತರ ಸ್ಕೂಟರ್ ನಲ್ಲಿದ್ದ ಯುವಕ ಮೀನು ಸಂಸ್ಕರಣಾ ಘಟಕದ ಗೇಟ್ ಗೆ ಡಿಕ್ಕಿ ಹೊಡೆದು ಮರ ಮತ್ತು ಅಂಗಡಿಯ ನಡುವಿನ ಸಣ್ಣ ಜಾಗವನ್ನು ಹಾದು ಹೋಗಿದ್ದಾನೆ. ಅದೃಷ್ಟವಶಾತ್ ಪಾದಚಾರಿಗಳು ಯಾರೂ ಕೂಡ ಇಲ್ಲದ ಕಾರಣ ಅನಾಹುತ ತಪ್ಪಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Kouzlo vody: Jak udělat z akvária skvělou dekoraci Чешский язык: Тест на IQ: найдите 3 стрелки за Co se stane, když kočku zataháte Originální recept