alex Certify ಪಾಕ್ ಪರ ಘೋಷಣೆ ಕೂಗಿದವರನ್ನು ಎನ್ ಕೌಂಟರ್ ಮಾಡಿ; ಪ್ರಮೋದ್ ಮುತಾಲಿಕ್ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಾಕ್ ಪರ ಘೋಷಣೆ ಕೂಗಿದವರನ್ನು ಎನ್ ಕೌಂಟರ್ ಮಾಡಿ; ಪ್ರಮೋದ್ ಮುತಾಲಿಕ್ ಆಕ್ರೋಶ

ಮಂಡ್ಯ: ಕವಲಂದೆ ಛೋಟಾ ಪಾಕಿಸ್ತಾನ ಎಂದು ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘೋಷಣೆ ಕೂಗಿದ ಆರೋಪಿಗಳ ವಿರುದ್ಧ ಇನ್ನೂ ಕ್ರಮ ಕೈಗೊಂಡಿಲ್ಲ. ರಾಜ್ಯ ಸರ್ಕಾರಕ್ಕೆ ಗಂಡಸ್ತನವಿಲ್ಲ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಮುತಾಲಿಕ್, ಪಾಕಿಸ್ತಾನದ ಪರ ಘೋಷಣೆ ಕೂಗಿದವರನ್ನು ಎನ್ ಕೌಂಟರ್ ಮಾಡಬೇಕು. ನಮ್ಮ ದೇಶ, ರಾಜ್ಯದಲ್ಲಿದ್ದುಕೊಂಡು ದೇಶದ್ರೋಹದ ಕೆಲಸ ಮಾಡುತ್ತಿದ್ದಾರೆ. ದೇಶದ್ರೋಹಿ ಘೋಷಣೆ ಕೂಗಿದವರನ್ನು ಒದ್ದು ಓಡಿಸಬೇಕು. ಘೋಷಣೆ ಕೂಗುತ್ತಿರುವವರ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲ. ಸರ್ಕಾರಕ್ಕೆ ಗಂಡಸ್ತನವಿಲ್ಲ ಎಂದು ಗುಡುಗಿದರು.

ನಾಳೆಯಿಂದ ದೇವಾಲಯಗಳಲ್ಲಿ ಸುಪ್ರಭಾತ ಅಭಿಯಾನ ಆರಂಭವಾಗುತ್ತದೆ. ಪೊಲೀಸರು ತಡೆಯಲು ಮುಂದಾದರೆ ಸಂಘರ್ಷ ನಡೆಯುವುದು ನಿಶ್ಚಿತ. ಸುಪ್ರೀಂ ಕೋರ್ಟ್ ಆದೇಶವನ್ನು ಇವರು ಪಾಲನೆ ಮಾಡುತ್ತಿಲ್ಲ. ಸರ್ಕಾರ, ತಕ್ಷಣ ಮಸೀದಿಗಳಲ್ಲಿನ ಮೈಕ್ ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...