alex Certify ಪುನೀತ್ ಗೆ ಪದ್ಮಶ್ರೀ, ಡಾ.ರಾಜ್ ಕುಮಾರ್ ಗೆ ಭಾರತ ರತ್ನ ಗೌರವಕ್ಕೆ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪುನೀತ್ ಗೆ ಪದ್ಮಶ್ರೀ, ಡಾ.ರಾಜ್ ಕುಮಾರ್ ಗೆ ಭಾರತ ರತ್ನ ಗೌರವಕ್ಕೆ ಮನವಿ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿಕೆ ಕನ್ನಡ ನಾಡಿನ ಜನರನ್ನು ಆಘಾತಕ್ಕೀಡು ಮಾಡಿದ್ದು, ಪುನೀತ್ ಸಮಾಧಿ ಬಳಿ ಸಾಗರೋಪಾದಿಯಲ್ಲಿ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಪುನೀತ್ ಯಾವುದೇ ಪ್ರಚಾರವಿಲ್ಲದೇ ಸೇವೆ ಮಾಡಿದವರು ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಪುನೀತ್ ರಾಜ್ ಕುಮಾರ್ ಅವರಿಗೆ ಪದ್ಮಶ್ರೀ ಹಾಗೂ ಡಾ.ರಾಜ್ ಕುಮಾರ್ ಅವರಿಗೆ ಭಾರತ ರತ್ನ ಗೌರವ ನೀಡಬೇಕು. ಈ ಬಗ್ಗೆ ಪ್ರಧಾನಿ ಮೋದಿಯವರಿಗೆ ಪತ್ರ ಬರೆಯುತ್ತೇನೆ ಎಂದು ತಿಳಿಸಿದರು.

ಭಾರಿ ಮಳೆ ಕಾರಣ 2 ದಿನ ಶಾಲೆಗಳಿಗೆ ರಜೆ ಘೋಷಣೆ: ತಮಿಳುನಾಡು ಸಿಎಂ ಸ್ಟಾಲಿನ್

ಪ್ರಚಾರವಿಲ್ಲದೇ ಸೇವೆ ಮಾಡಿದವರು ಪುನೀತ್ ಅವರು. ಶಕ್ತಿಧಾಮಕ್ಕೆ ನೆರವು ನೀಡುವ ಬಗ್ಗೆ ಪುನೀತ್ ಪತ್ನಿ ಅಶ್ವಿನಿ ಅವರ ಜೊತೆ ಮಾತನಾಡಿದ್ದೇನೆ. ನೇತ್ರದಾನದ ಬಗ್ಗೆ ನಮ್ಮ ಕುಟುಂಬದವರು ಅಭಿಯಾನ ಮಾಡುತ್ತೇವೆ. ಇನ್ನು ದಾವಣಗೆರೆಯಲ್ಲಿ ಗಾಯಕ ರಾಜೇಶ್ ಕೃಷ್ಣನ್ ಅವರಿಂದ ನುಡಿನಮನ ಕಾರ್ಯಕ್ರಮ ನಡೆಯಲಿದೆ. 10 ಸಾವಿರ ಜನರು ಸೇರಿ ಪುನೀತ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದೇವೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...