alex Certify ‘ಪುನೀತ್ ನಮನ’ ಕಾರ್ಯಕ್ರಮಕ್ಕೆ ಚಂದಾ ವಸೂಲಿ ಆರೋಪ; ಸ್ಪಷ್ಟನೆ ನೀಡಿದ ಫಿಲ್ಮ್ ಚೇಂಬರ್ ಅಧ್ಯಕ್ಷ ಜೈರಾಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಪುನೀತ್ ನಮನ’ ಕಾರ್ಯಕ್ರಮಕ್ಕೆ ಚಂದಾ ವಸೂಲಿ ಆರೋಪ; ಸ್ಪಷ್ಟನೆ ನೀಡಿದ ಫಿಲ್ಮ್ ಚೇಂಬರ್ ಅಧ್ಯಕ್ಷ ಜೈರಾಜ್

ಬೆಂಗಳೂರು; ನವೆಂಬರ್ 16ರಂದು ನಡೆಯಲಿರುವ ಪುನೀತ್ ನಮನ ಕಾರ್ಯಕ್ರಮಕ್ಕೆ ಚಂದಾ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಫಿಲ್ಮ್ ಚೇಂಬರ್ ವಿರುದ್ಧ ನಿರ್ಮಾಪಕ ಜೆ.ಜೆ. ಶ್ರೀನಿವಾಸ್ ಸೇರಿದಂತೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ಚಿತ್ರರಂಗದಿಂದ ಶ್ರದ್ಧಾಂಜಲಿ ಸಲ್ಲಿಸುವ ನಿಟ್ಟಿನಲ್ಲಿ ‘ಪುನೀತ್ ನಮನ’ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಚಂದಾ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಈ ರೀತಿ ಮಾಡುವುದು ಒಬ್ಬ ಮೇರು ನಟನಿಗೆ ನುಡಿ ನಮನ ಸಲ್ಲಿಸುವ ನೆಪದಲ್ಲಿ ಸಲ್ಲಿಸುತ್ತಿರುವ ಅಗೌರವ ಎಂದು ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಹಕರಿಗೆ ಗುಡ್ ನ್ಯೂಸ್: ಹೊಸ ಪ್ಯಾಕೇಜಿಂಗ್ ನಿಯಮ ಜಾರಿ

ಈ ಬಗ್ಗೆ ಪ್ರತಿಕ್ರಿಯಿಸಿರುವ ಫಿಲ್ಮ್ ಚೇಂಬರ್ ಅಧ್ಯಕ್ಷ ಜೈರಾಜ್, ಪುನೀತ್ ನಮನ ಕಾರ್ಯಕ್ರಮಕ್ಕೆ ಯಾವುದೇ ಚಂದಾ ವಸೂಲಿ ಮಾಡಲಾಗುತ್ತಿಲ್ಲ. ಇದು ಫಿಲ್ಮ್ ಚೇಂಬರ್ ವಿರುದ್ಧ ಮಾಡುತ್ತಿರುವ ಅನಗತ್ಯ ಆರೋಪ. ಕಾರ್ಯಕ್ರಮ ನಡೆಸಲು ವಾಣಿಜ್ಯ ಮಂಡಳಿಯಲ್ಲಿ ಹಣವಿದೆ. ನಾವು ಯಾರಿಂದಲೂ ಹಣ ಪಡೆದು ಕಾರ್ಯಕ್ರಮ ನಡೆಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...