alex Certify ಪುನೀತ್ ರಾಜಕುಮಾರ್ ಅವರ ‘ಗಂಧದಗುಡಿ’ ಪ್ರಿ ರಿಲೀಸ್ ಇವೆಂಟ್ ಗೆ ಅದ್ದೂರಿ ಸಿದ್ದತೆ; ರಜನಿ – ಚಿರಂಜೀವಿ – ಬಿಗ್ ಬಿ ಆಗಮಿಸುವ ನಿರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪುನೀತ್ ರಾಜಕುಮಾರ್ ಅವರ ‘ಗಂಧದಗುಡಿ’ ಪ್ರಿ ರಿಲೀಸ್ ಇವೆಂಟ್ ಗೆ ಅದ್ದೂರಿ ಸಿದ್ದತೆ; ರಜನಿ – ಚಿರಂಜೀವಿ – ಬಿಗ್ ಬಿ ಆಗಮಿಸುವ ನಿರೀಕ್ಷೆ

ಪುನೀತ್ ರಾಜಕುಮಾರ್, ಆ ಒಂದು ಹೆಸರು ಕರ್ನಾಟಕದ ಜನತೆ ಎಂದಿಗೂ ಮರೆಯಲಾರರು. ಅಪ್ಪು ನಮ್ಮಿಂದ ದೂರವಾಗಿದ್ದರೂ ಸಹ ಕನ್ನಡಿಗರ ಮನದಲ್ಲಿ ಅವರು ಅಜರಾಮರ. ಇಂದಿಗೂ ಕೂಡ ಪುನೀತ್ ರಾಜಕುಮಾರ್ ಅವರು ಎಲ್ಲರೆದೆಯಲ್ಲಿ ಜೀವಂತವಾಗಿದ್ದಾರೆ.

ಇದೀಗ ಅವರ ನಿರ್ಮಾಣದ ‘ಗಂಧದಗುಡಿ’ಚಿತ್ರದ ಪ್ರಿ ರಿಲೀಸ್ ಇವೆಂಟ್ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಕ್ಟೋಬರ್ 21ರಂದು ನಡೆಯಲಿದ್ದು, ಇದಕ್ಕಾಗಿ ಅದ್ದೂರಿ ಸಿದ್ಧತೆ ನಡೆಸಲಾಗಿದೆ. ಈ ಒಂದು ಕ್ಷಣಕ್ಕೆ ಸಾಕ್ಷಿಯಾಗಲು ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸೇರಿದಂತೆ ಚಿತ್ರರಂಗದ ಗಣ್ಯರು, ನಟ – ನಟಿಯರು ಹಾಗೂ ತಂತ್ರಜ್ಞರು ಭಾಗವಹಿಸಲಿದ್ದಾರೆ. ಮೂಲಗಳ ಪ್ರಕಾರ ಖ್ಯಾತ ನಟರುಗಳಾದ ರಜನಿಕಾಂತ್, ಚಿರಂಜೀವಿ ಹಾಗೂ ಅಮಿತಾಬ್ ಬಚ್ಚನ್ ಸಹ ‘ಗಂಧದಗುಡಿ’ ಪ್ರಿ ರಿಲೀಸ್ ಇವೆಂಟ್ ಗೆ ಆಗಮಿಸಲಿದ್ದಾರೆ ಎನ್ನಲಾಗಿದೆ.

ಅಮೋಘ ವರ್ಷ ನಿರ್ದೇಶನದ ‘ಗಂಧದಗುಡಿ’ ಚಿತ್ರದಲ್ಲಿ ನಾಡಿನ ವನ್ಯಜೀವಿ ಸಂಪತ್ತಿನ ಸೌಂದರ್ಯವನ್ನು ಅನಾವರಣಗೊಳಿಸಲಾಗಿದ್ದು, ಅಕ್ಟೋಬರ್ 28ರಂದು ಈ ಚಿತ್ರ ಬಿಡುಗಡೆಯಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...