alex Certify ಪುನೀತ್ ರಾಜಕುಮಾರ್ ಸ್ಮರಣಾರ್ಥ ಮಿಷನ್ ಆಸ್ಪತ್ರೆಗೆ ‘ಅಪ್ಪು ಎಕ್ಸ್ ಪ್ರೆಸ್’ ಆಂಬುಲೆನ್ಸ್ ಕೊಡುಗೆ; ಬ್ಲಡ್ ಬ್ಯಾಂಕ್ ಸಹ ಸ್ಥಾಪಿಸಿಕೊಡುವುದಾಗಿ ಹೇಳಿದ ನಟ ಪ್ರಕಾಶ್ ರಾಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪುನೀತ್ ರಾಜಕುಮಾರ್ ಸ್ಮರಣಾರ್ಥ ಮಿಷನ್ ಆಸ್ಪತ್ರೆಗೆ ‘ಅಪ್ಪು ಎಕ್ಸ್ ಪ್ರೆಸ್’ ಆಂಬುಲೆನ್ಸ್ ಕೊಡುಗೆ; ಬ್ಲಡ್ ಬ್ಯಾಂಕ್ ಸಹ ಸ್ಥಾಪಿಸಿಕೊಡುವುದಾಗಿ ಹೇಳಿದ ನಟ ಪ್ರಕಾಶ್ ರಾಜ್

ಖ್ಯಾತ ನಟ ಪುನೀತ್ ರಾಜಕುಮಾರ್ ನಮ್ಮನ್ನಗಲಿ ಹಲವು ತಿಂಗಳುಗಳೇ ಕಳೆದಿದ್ದರೂ ಸಹ ಜನಮಾನಸದಲ್ಲಿ ಅವರು ಚಿರಸ್ಥಾಯಿಯಾಗಿದ್ದಾರೆ. ಅವರ ಸ್ಮರಣಾರ್ಥ ಜನಪಯೋಗಿ ಕಾರ್ಯಗಳನ್ನು ಮಾಡಲಾಗುತ್ತಿದ್ದು, ಇದೀಗ ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್, ಮೈಸೂರಿನ ಮಿಷನ್ ಆಸ್ಪತ್ರೆಗೆ ‘ಅಪ್ಪು ಎಕ್ಸ್ ಪ್ರೆಸ್’ ಆಂಬುಲೆನ್ಸ್ ಅನ್ನು ಕೊಡುಗೆಯಾಗಿ ನೀಡಿದ್ದಾರೆ.

ಶನಿವಾರದಂದು ಮಂಡಿ ಮೊಹಲ್ಲಾದ ಸಿಎಸ್ಐ ಓಲ್ಡ್ ವರ್ಥ್ ಸ್ಮಾರಕ ಆಸ್ಪತ್ರೆಗೆ ಪುನೀತ್ ರಾಜಕುಮಾರ್ ಅವರ ಸ್ಮರಣಾರ್ಥ ‘ಅಪ್ಪು ಎಕ್ಸ್ ಪ್ರೆಸ್’ ಅಂಬುಲೆನ್ಸ್ ಅರ್ಪಿಸಿದ ಪ್ರಕಾಶ್ ರಾಜ್ ಮುಂದಿನ ದಿನಗಳಲ್ಲಿ ಈ ಆಸ್ಪತ್ರೆಗೆ ಬ್ಲಡ್ ಬ್ಯಾಂಕ್ ಸಹ ಸ್ಥಾಪಿಸಿಕೊಡುವುದಾಗಿ ತಿಳಿಸಿದರು.

ಬಾಲ್ಯದಿಂದಲೂ ನಾನು ಅಪ್ಪು ಅವರನ್ನು ನೋಡಿದ್ದೇನೆ. ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ದೊಡ್ಡ ಮಟ್ಟಕ್ಕೆ ಬೆಳೆದ ಅವರು ಎಲ್ಲರಿಗೂ ಮಾದರಿ ಎಂದು ಹೇಳಿದರಲ್ಲದೆ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಒಂದು ವರ್ಷದೊಳಗೆ ‘ಅಪ್ಪು ಎಕ್ಸ್ ಪ್ರೆಸ್’ ಹೆಸರಿನ ಆಂಬುಲೆನ್ಸ್ ಗಳನ್ನು ನೀಡುವ ಯೋಜನೆ ಇದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...