alex Certify ಪೆರೋಲ್‌ ಮೇಲೆ ಹೊರಗೆ ಬಂದ ಅತ್ಯಾಚಾರಿ ಬಾಬಾ; ಸಾಲುಗಟ್ಟಿ ಆಶೀರ್ವಾದ ಪಡೆದ ಬಿಜೆಪಿ ಮುಖಂಡರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೆರೋಲ್‌ ಮೇಲೆ ಹೊರಗೆ ಬಂದ ಅತ್ಯಾಚಾರಿ ಬಾಬಾ; ಸಾಲುಗಟ್ಟಿ ಆಶೀರ್ವಾದ ಪಡೆದ ಬಿಜೆಪಿ ಮುಖಂಡರು

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ದೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ ಗೆ 40 ದಿನಗಳ ಪೆರೋಲ್ ದೊರೆತಿದೆ. ಈ ಬೆನ್ನಲ್ಲೇ ವಿವಾದಿತ ಸ್ವಯಂ ಘೋಷಿತ ದೇವ ಮಾನವನ ದರ್ಶನಕ್ಕೆ ರಾಜಕೀಯ ನಾಯಕರು ಸಾಲುಗಟ್ಟಿ ನಿಂತಿದ್ದಾರೆ. ಈ ವಿಚಾರ ಇದೀಗ ಚರ್ಚೆಗೆ ಗ್ರಾಸವಾಗಿದೆ‌.

ಹೌದು, ಸ್ವಯಂ ಘೋಷಿತ ದೇವಮಾನವ ಉತ್ತರ ಪ್ರದೇಶದ ಬಾಗಪಟ್ ನ ಆಶ್ರಮದಲ್ಲಿ ಇದ್ದಾನೆ ಎನ್ನಲಾಗಿದೆ. ಈತನನ್ನ ನೋಡಲು ಬಿಜೆಪಿ ನಾಯಕರು ಮುಗಿಬಿದ್ದಿದ್ದಾರೆ. ಕರ್ನಾಲ್ ಮೇಯರ್ ರೇಣು ಬಾಲ ಗುಪ್ತಾ, ಉಪ ಮೇಯರ್ ನವೀನ್ ಕುಮಾರ್ ಮತ್ತು ರಾಜೇಶ್ ಅಗ್ಗಿ, ಚುನಾವಣೆಗೆ ನಿಂತ ಇತರ ಅಭ್ಯರ್ಥಿಗಳು ಈತನ ಭೇಟಿಗಾಗಿ ಸಾಲುಗಟ್ಟಿ ನಿಂತಿದ್ದರು ಎನ್ನಲಾಗಿದೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.

ಇನ್ನು ಈ ಪೆರೋಲ್ ಸದ್ಯ ಚರ್ಚೆಗೆ ಗ್ರಾಸವಾಗಿದೆ. ಯಾಕಂದರೆ, ನವೆಂಬರ್ 3 ರಂದು ನಡೆಯಲಿರುವ ಅದಮ್‌ಪುರ್ ಉಪ ಚುನಾವಣೆ ಮತ್ತು ನವೆಂಬರ್ 12 ರಂದು ನಡೆಯಲಿರುವ ಹರ್ಯಾಣ ಪಂಚಾಯತ್ ಚುನಾವಣೆಗಳ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಸಂಭವಿಸಿರೋದು ವಿಪರ್ಯಾಸ.

ಇನ್ನು, ಈತ ತನ್ನ ಪಂಥದ ಮಾಜಿ ಮ್ಯಾನೇಜರ್ ಒಬ್ಬರನ್ನು ಕೊಲೆಗೈದ ಪ್ರಕರಣದಲ್ಲಿ ಈತ ಮತ್ತು ಇತರ ನಾಲ್ವರು ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ. ತನ್ನ ಇಬ್ಬರು ಮಹಿಳಾ ಅನುಯಾಯಿಗಳ ಮೇಲೆ ಅತ್ಯಾಚಾರಗೈದ ಪ್ರಕರಣದಲ್ಲಿ ಆತ 20 ವರ್ಷಗಳ ಕಾರಾಗೃಹ ಶಿಕ್ಷೆಗೆ ಒಳಗಾಗಿದ್ದರು.

— Mohammed Zubair (@zoo_bear) October 19, 2022

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Kaip išsaugoti miltelius ir palaikyti švarią aplinką: kodėl verta Top 10 maisto produktų, kurie padeda Kenksmingos plaukų dažų sudėties pagrindinė 6 paprasti būdai, kaip išspręsti užsikimšusį klozetą per Kaip tinkamai dozuoti druską: patarimai dėl druskos kiekio ir Pagrindiniai žiedinių kopūstų privalumai: neįtikėtinos naudos