alex Certify ಪೊಲೀಸ್ ವಿಚಾರಣೆಗೆ ಹೆದರಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ವಿಚಾರಣೆಗೆ ಹೆದರಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಕಲಬುರ್ಗಿ: ಪೊಲೀಸ್ ವಿಚಾರಣೆಗೆ ಹೆದರಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಪೊಲೀಸ್ ಠಾಣೆಯ ಎದುರು ಶವವಿಟ್ಟು ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ.

ಮನೋಜ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ನಾಗೇಶ್ ಹಾಗೂ ಪ್ರತಿಭಾ ದಂಪತಿಗೆ ಗಂಡು ಮಗುವಿತ್ತು. ಪತಿ-ಪತ್ನಿ ನಡುವೆ ಜಗಳ ಆರಂಭವಾಗಿ ಕಳೆದ ಒಂದು ವರ್ಷದಿಂದ ದೂರವಿದ್ದರು. ಪ್ರತಿಭಾ ಮಗುವನ್ನು ತನ್ನ ಬಳಿಯೇ ಇರಿಸಿಕೊಂಡಿದ್ದಳು. ಆದರೆ ವರ್ತೂರು ಗ್ರಾಮದಲ್ಲಿ ಮದುವೆಗೆಂದು ಬಂದಿದ್ದ ನಾಗೇಶ್ ಮಗನನ್ನು ಕರೆದುಕೊಂಡು ಪುಣಾಗೆ ಹೋಗಿದ್ದಾನೆ. ನಾಗೇಶ್ ಮಗುವನ್ನು ಕರೆದೊಯ್ಯಲು ಮನೋಜ್ ಎಂಬಾತ ಸಹಾಯ ಮಾಡಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಈ ಬಗ್ಗೆ ಪೊಲಿಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಮನೋಜ್ ನನ್ನು ಠಾಣೆಗೆ ಕರೆದು ವಿಚಾರಿಸಿದ ಪೊಲೀಸರು ನಾಗೇಶ್ ನನ್ನು ಕರೆದುಕೊಂಡು ಬರುವಂತೆ ಸೂಚಿಸಿದ್ದರು. ಪೊಲೀಸ್ ವಿಚಾರಣೆ, ಮರ್ಯಾದೆಗೆ ಅಂಜಿದ ಮನೋಜ್ ಇದೀಗ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಹಬಾದ್ ಠಾಣೆ ಪೊಲೀಸರ ಕಿರುಕುಳದಿಂದಲೇ ಮನೋಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...