alex Certify ಪ್ರಧಾನಿ ಮೋದಿ ವಿಷ ಕುಡಿದ ನೀಲಕಂಠ; ಸಿಎಂ ಬೊಮ್ಮಾಯಿ ಬಣ್ಣನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನಿ ಮೋದಿ ವಿಷ ಕುಡಿದ ನೀಲಕಂಠ; ಸಿಎಂ ಬೊಮ್ಮಾಯಿ ಬಣ್ಣನೆ

ಪ್ರಧಾನಿ ನರೇಂದ್ರ ಮೋದಿಯವರನ್ನು ವಿಷದ ಸರ್ಪ ಎಂದು ಕರೆದಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸರ್ಪ ಶಿವನ ಕೊರಳಲ್ಲಿ ಇರುತ್ತದೆ. ಹಾಗೆಯೇ ನರೇಂದ್ರ ಮೋದಿಯವರು ವಿಷ ಕುಡಿದ ನೀಲಕಂಠನಂತೆ ಎಂದರು.

ಸೇಡಂನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಜಗತ್ತಿನ ಎಲ್ಲ ವಿಷವನ್ನು ನರೇಂದ್ರ ಮೋದಿ ಕುಡಿದು ನೀಲಕಂಠನಂತೆ ವರ್ತಿಸಿದ್ದಾರೆ. ಭಯೋತ್ಪಾದನೆಯನ್ನು ಹೊಡೆದೋಡಿಸುವ ಮೂಲಕ ಶಾಂತಿ ನೆಮ್ಮದಿ ಸ್ಥಾಪಿಸಿದ್ದಾರೆ ಎಂದು ಬಣ್ಣಿಸಿದರು.

ನರೇಂದ್ರ ಮೋದಿ ಅವರನ್ನು ನೆನಪಿಸಿಕೊಂಡರೆ ಕಾಂಗ್ರೆಸ್ ಸೋಲಿನ ಭಯದಿಂದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನಿದ್ರೆ ಬರುವುದಿಲ್ಲ. ಹೀಗಾಗಿಯೇ ಮೋದಿಯವರನ್ನು ಮನಸ್ಸಿಗೆ ಬಂದಂತೆ ನಿಂದಿಸುತ್ತಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...