alex Certify ಪ್ರಮಾಣವಚನ ಸ್ವೀಕಾರಕ್ಕೂ ಮುನ್ನವೇ ಮಾಜಿ ಸಂಸದರು, ಶಾಸಕರ ಭದ್ರತೆ ಹಿಂಪಡೆದ ಪಂಜಾಬ್​ ನಿಯೋಜಿತ ಸಿಎಂ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಮಾಣವಚನ ಸ್ವೀಕಾರಕ್ಕೂ ಮುನ್ನವೇ ಮಾಜಿ ಸಂಸದರು, ಶಾಸಕರ ಭದ್ರತೆ ಹಿಂಪಡೆದ ಪಂಜಾಬ್​ ನಿಯೋಜಿತ ಸಿಎಂ….!

ಮಾರ್ಚ್​ 16ರಂದು ಪಂಜಾಬ್​ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿರುವ ಆಮ್​ ಆದ್ಮಿ ಪಕ್ಷದ ಭಗವಂತ್​ ಮಾನ್​, ರಾಜ್ಯದಲ್ಲಿರುವ ಅನೇಕ ವಿವಿಐಪಿಗಳು ಸೇರಿದಂತೆ ಮಾಜಿ ಸಂಸದರು ಹಾಗೂ ಶಾಸಕರಿಗೆ ಒದಗಿಸಲಾದ ಭದ್ರತೆಯನ್ನು ಹಿಂಪಡೆಯುವಂತೆ ಆದೇಶ ಹೊರಡಿಸಿದ್ದಾರೆ.

ಮಾನ್​ ಇಂದು ಹೊರಡಿಸಿರುವ ಆದೇಶದ ಪ್ರಕಾರ, ಕೇಂದ್ರ ಗೃಹ ಸಚಿವಾಲಯದ ಸೂಚನೆ ಮೇರೆಗೆ ಬಾದಲ್​ ಕುಟುಂಬಕ್ಕೆ ನೀಡಲಾದ ಭದ್ರತೆ, ಮಾಜಿ ಸಿಎಂಗಳಾದ ಕ್ಯಾಪ್ಟನ್​ ಅಮರಿಂದರ್​ ಸಿಂಗ್​, ಚರಣ್​ಜೀತ್​ ಸಿಂಗ್​ ಚನ್ನಿಯನ್ನು ಹೊರತುಪಡಿಸಿ ಮಿಕ್ಕೆಲ್ಲ ನಾಯಕರ ಭದ್ರತೆಯನ್ನು ಹಿಂಪಡೆಯಲಾಗಿದೆ.
ಪಂಜಾಬ್​ನ ನಿಯೋಜಿತ ಸಿಎಂ ಭಗವಂತ್​ ಮಾನ್​ ಇಂದು ರಾಜ್ಯಪಾಲ ಬನ್ವರಿಲಾಲ್​ ಪುರೋಹಿತ್​​ರನ್ನು ಭೇಟಿ ಮಾಡಿ ರಾಜ್ಯದಲ್ಲಿ ಸರ್ಕಾರ ರಚನೆಯ ಹಕ್ಕನ್ನು ಮಂಡಿಸಿದರು.

ನಾನು ರಾಜ್ಯಪಾಲರನ್ನು ಭೇಟಿಯಾಗಿ ನಮ್ಮ ಶಾಸಕರ ಬೆಂಬಲದ ಪತ್ರವನ್ನು ಹಸ್ತಾಂತರಿಸಿದ್ದೇನೆ. ನಾವು ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದೇವೆ ಎಂದು ಭಗವಂತ್​ ಮಾನ್​ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...