alex Certify ಪ್ರಳಯ ಆದ್ರೂ 14 ಜನರನ್ನು ವಾಪಸ್ ಸೇರಿಸಿಕೊಳ್ಳಲ್ಲ; ಪಕ್ಷ ತ್ಯಜಿಸಿದ ಶಾಸಕರ ವಿರುದ್ದ ಸಿದ್ದರಾಮಯ್ಯ ಗುಡುಗು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಳಯ ಆದ್ರೂ 14 ಜನರನ್ನು ವಾಪಸ್ ಸೇರಿಸಿಕೊಳ್ಳಲ್ಲ; ಪಕ್ಷ ತ್ಯಜಿಸಿದ ಶಾಸಕರ ವಿರುದ್ದ ಸಿದ್ದರಾಮಯ್ಯ ಗುಡುಗು

ಬೆಂಗಳೂರು: 17 ಜನ ಮಾತ್ರವಲ್ಲ ಯಾರು ಬೇಕಾದರೂ ಪಕ್ಷಕ್ಕೆ ಬರಬಹುದು ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ ಬೆನ್ನಲ್ಲೇ ಅಸಮಾಧಾನ ವ್ಯಕ್ತಪಡಿಸಿರುವ ಸಿಎಲ್ಪಿ ನಾಯಕ ಸಿದ್ದರಾಮಯ್ಯ, ಅರ್ಜಿ ಹಾಕಲಿ ಪರಿಶೀಲಿಸುತ್ತೇವೆ ಎಂದಿದ್ದಾರೆ. ಪಕ್ಷ ಬಿಟ್ಟ 14 ಜನ ಬರಲಿ ಎಂದು ಅವರು ಹೇಳಿಕೆ ನೀಡಿಲ್ಲ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನಾನು ಡಿ.ಕೆ. ಶಿವಕುಮಾರ್ ಜೊತೆ ಮಾತನಾಡುತ್ತೇನೆ. ಅವರು ಹೇಳಿದ್ದು ಯಾರು ಬೇಕಾದರೂ ಬರಬಹುದು ಎಂದು 14 ಜನರ ಬಗ್ಗೆ ಹೇಳಿಕೆ ನೀಡಿಲ್ಲ. ಪಕ್ಷಕ್ಕೆ ಮೋಸ ಮಾಡಿ ಹೋದ 14 ಜನರನ್ನು ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ. ಈ ಬಗ್ಗೆ ನಾನು ಈ ಹಿಂದೆ ಸ್ಪಷ್ಟಪಡಿಸಿದ್ದೇನೆ. ಪ್ರಳಯ ಆದರೂ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ ಎಂದು ಸದನದಲ್ಲಿ ನಡೆದ ಕಲಾಪದ ವೇಳೆ ಕೂಡ ಹೇಳಿದ್ದೇನೆ ಎಂದರು.

ಡಿ.ಕೆ. ಶಿವಕುಮಾರ್ ಅವರು ಹೇಳಿದ್ದು ಆ ಅರ್ಥದಲ್ಲಿ ಅಲ್ಲ. ಪಕ್ಷದ ಸಿದ್ಧಾಂತಗಳನ್ನು ಒಪ್ಪಿ ಪಕ್ಷಕ್ಕೆ ಸೇರಲು ಇಚ್ಛಿಸಿದವರು ಅರ್ಜಿ ಹಾಕಿದರೆ ಪರಿಶೀಲಿಸಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರಷ್ಟೇ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...