alex Certify ಪ್ರಾಧ್ಯಾಪಕನಿಂದಲೇ ವಿದ್ಯಾರ್ಥಿನಿ ಮೊಬೈಲ್ ಗೆ ಅಶ್ಲೀಲ ಸಂದೇಶ; ದೂರು ದಾಖಲಾಗುತ್ತಿದ್ದಂತೆ ಪರಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಾಧ್ಯಾಪಕನಿಂದಲೇ ವಿದ್ಯಾರ್ಥಿನಿ ಮೊಬೈಲ್ ಗೆ ಅಶ್ಲೀಲ ಸಂದೇಶ; ದೂರು ದಾಖಲಾಗುತ್ತಿದ್ದಂತೆ ಪರಾರಿ

ಮಹಾನಾಯಕ - Online Kannada News Portal

ಪ್ರಾಧ್ಯಾಪಕನೊಬ್ಬ ತನ್ನ ವಿದ್ಯಾರ್ಥಿನಿ ಮೊಬೈಲ್ ಗೆ ಸಾಮಾಜಿಕ ಜಾಲತಾಣ ವಾಟ್ಸಾಪ್ ಮೂಲಕ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದು, ಇದೀಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾನೆ.

ರಾಮನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಎಚ್.ಆರ್. ರಾಮಕೃಷ್ಣ, ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ಕಳುಹಿಸಿದವರಾಗಿದ್ದು ಅವರ ವಿರುದ್ಧ ಈಗ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಾಮಕೃಷ್ಣ ರಾತ್ರಿ ಸಮಯದಲ್ಲಿ ಈ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದರು ಎನ್ನಲಾಗಿದ್ದು, ರೋಸಿ ಹೋದ ವಿದ್ಯಾರ್ಥಿನಿ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಹೀಗಾಗಿ ವಿಚಾರಿಸಲು ಪೋಷಕರು ಕಾಲೇಜಿಗೆ ಬರುತ್ತಿದ್ದಂತೆ ಪ್ರಾಧ್ಯಾಪಕ ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಮಹಿಳಾ ಠಾಣೆ ಪೋಲೀಸರು ಆರೋಪಿ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಆಘಾತಕಾರಿ ಸಂಗತಿ ಎಂದರೆ ಇದೇ ಪ್ರಾಧ್ಯಾಪಕ ಈ ಹಿಂದೆ ಸಹ ಮತ್ತೊಬ್ಬ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಎನ್ನಲಾಗಿದ್ದು, ಈ ಕಾರಣಕ್ಕಾಗಿಯೇ ಆ ವಿದ್ಯಾರ್ಥಿನಿ ಕಾಲೇಜನ್ನೇ ತೊರೆದಿದ್ದಳು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...