alex Certify ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂಬ ಕಾರಣಕ್ಕೆ ನೇಣಿಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂಬ ಕಾರಣಕ್ಕೆ ನೇಣಿಗೆ ಶರಣು

ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂಬ ಕಾರಣಕ್ಕೆ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಮುತ್ತಿನಕೊಪ್ಪದಲ್ಲಿ ನಡೆದಿದೆ.

33 ವರ್ಷದ ಚೇತನ್ ಸಾವನ್ನಪ್ಪಿದ ವ್ಯಕ್ತಿಯಾಗಿದ್ದು, ಈತ ಅದಕ್ಕೂ ಮುನ್ನ ಮೊಬೈಲ್ ವಾಯ್ಸ್ ಮೆಸೇಜ್ ನಲ್ಲಿ ನಾನು ಒಂದು ಹುಡುಗಿಯನ್ನು ಪ್ರೀತಿಸುತ್ತಿದ್ದೆ. ಆದರೆ ಆಕೆ ಸಿಗದ ಕಾರಣ ಸಾವಿಗೆ ಶರಣಾಗುತ್ತಿದ್ದೇನೆ ಎಂದು ಹೇಳಿದ್ದಾನೆ.

ಆದರೆ ಚೇತನ್ ತಂದೆ ತಮ್ಮ ಮಗನ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ್ದು, ಈ ಕುರಿತು ನರಸಿಂಹರಾಜಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...