alex Certify ಪ್ರೀತಿಸಿ ಕೈಕೊಟ್ಟ ಯುವತಿ; ವಾಯ್ಸ್ ಮೆಸೇಜ್, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಯುವಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೀತಿಸಿ ಕೈಕೊಟ್ಟ ಯುವತಿ; ವಾಯ್ಸ್ ಮೆಸೇಜ್, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಯುವಕ

ಚಿಕ್ಕಮಗಳೂರು: 9 ವರ್ಷಗಳ ಕಾಲ ಪ್ರೀತಿಸಿ ಮದುವೆಗೆ ನಿರಾಕರಿಸಿ ಯುವತಿ ಕೈಕೊಟ್ಟಿದ್ದಕ್ಕೆ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಶಂಕರಪುರದಲ್ಲಿ ನಡೆದಿದೆ.

ಚೇತನ್ (31) ಆತ್ಮಹತ್ಯೆಗೆ ಶರಣಾದ ಯುವಕ. ಗಾನವಿ ಎಂಬ ಯುವತಿ ತನಗೆ ಮೋಸ ಮಾಡಿದ್ದಾಳೆ. ಕಳೆದ 9 ವರ್ಷಗಳಿಂದ ನಾನು ಹಾಗೂ ಗಾನವಿ ಪರಸ್ಪರ ಪ್ರೀತಿಸಿತ್ತಿದ್ದೆವು. ಆದರೆ ಈಗ ಆಕೆ ಮದುವೆ ನಿರಾಕರಿಸಿದ್ದಾಳೆ. ಅಲ್ಲದೇ ನನ್ನಿಂದ ಗಾನವಿ 4 ಲಕ್ಷ ರೂಪಾಯಿ ಹಣವನ್ನೂ ಪಡೆದಿದ್ದಳು ಎಂದು ಸಂಬಂಧಿಕರಿಗೆ ವಾಯ್ಸ್ ಮೆಸೇಜ್ ಕಳುಹಿಸಿ ಚೇತನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಅಲ್ಲದೇ ಚೇತನ್ ಬರೆದಿರುವ ಡೆತ್ ನೋಟ್ ಕೂಡ ಲಭ್ಯವಾಗಿದ್ದು, ನನ್ನ ಸಾವಿಗೆ ನ್ಯಾಯ ಸಿಗಬೇಕು ಎಂದರೆ ಗಾನವಿಗೆ ಶಿಕ್ಷೆಯಾಗಲಿ. ನನಗೆ ಮಾನಸಿಕ ಕಿರುಕುಳ ನೀಡಿದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿದ್ದಾನೆ.

ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...