alex Certify ಪ್ರೀತಿಸಿ ಮದುವೆಯಾಗಿದ್ದಾಕೆಯನ್ನೇ ಕತ್ತು ಕುಯ್ದು ಹತ್ಯೆ ಮಾಡಿದ ಮಾಜಿ ಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೀತಿಸಿ ಮದುವೆಯಾಗಿದ್ದಾಕೆಯನ್ನೇ ಕತ್ತು ಕುಯ್ದು ಹತ್ಯೆ ಮಾಡಿದ ಮಾಜಿ ಪತಿ

ಮಂಡ್ಯ: ಇವರು ಪ್ರೀತಿಸಿ ಮದುವೆಯಾಗಿದ್ದರು. ಆರಂಭದಲ್ಲಿ ಸಂಸಾರದ ನೌಕೆ ಉತ್ತಮವಾಗಿಯೇ ಸಾಗುತ್ತಿತ್ತು. ಎರಡು ಮಕ್ಕಳಾಗುವವರೆಗೂ ಬಡವನಾದರೆ ಏನು ಪ್ರಿಯೆ ಕೈ ತುತ್ತು ತಿನಿಸುವೆ ಎಂಬಷ್ಟು ಸಮರಸ ತುಂಬಿ ತುಳುಕುತ್ತಿತ್ತು. ಆದರೆ, ಚಟಕ್ಕೆ ಬಿದ್ದ ಪತಿ ಅಡ್ಡ ಹಾದಿ ಹಿಡಿಯಲು ಪ್ರಾರಂಭಿಸಿದ, ಈಗ ಪತ್ನಿಯನ್ನೇ ಕೊಲೆ ಮಾಡಿದ್ದಾನೆ.

ಇಂತದೊಂದು ಘಟನೆ ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿಯಲ್ಲಿ ನಡೆದಿದೆ. ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ್ದು, ಶಾಲಿನಿ(32) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ. ಸುರೇಶ್(40) ಕೊಲೆ ಮಾಡಿದ ಆರೋಪಿಯಾಗಿದ್ದಾನೆ.

ಶಾಲಿನಿ ಹಾಗೂ ಸುರೇಶ್ ಕಾಲೇಜಿಗೆ ಹೋಗುವ ಸಂದರ್ಭದಲ್ಲಿಯೇ ಪರಸ್ಪರ ಪ್ರೀತಿಸುತ್ತಿದ್ದರು. ಆನಂತರ ಇಬ್ಬರು ಮದುವೆಯಾಗಿದ್ದರು. ಮದುವೆಯಾದ ಸಂದರ್ಭದಲ್ಲಿ ಇಬ್ಬರು ಪ್ರೀತಿಯಿಂದಲೇ ಬದುಕು ಸಾಗಿಸಿದ್ದರು. ಪ್ರೀತಿಯ ಸಂಕೇತವಾಗಿ ಇಬ್ಬರು ಹೆಣ್ಣು ಮಕ್ಕಳು ಕೂಡ ಇದ್ದಾರೆ. ಆದರೆ, ಕೆಲವು ವರ್ಷಗಳು ಕಳೆದ ಮೇಲೆ ಸುರೇಶ್, ಕುಡಿತದ ದಾಸನಾಗಿ ಪತ್ನಿಯನ್ನು ಹಿಂಸಿಸಲು ಪ್ರಾರಂಭಿಸಿದ್ದಾನೆ.

ಅದರಲ್ಲಿಯೂ ಎರಡನೇ ಮಗು ಕೂಡ ಹೆಣ್ಣಾಗುತ್ತಿದ್ದಂತೆ ಈತನ ವಿಕೃತಿ ಮಿತಿ ಮೀರಲು ಪ್ರಾರಂಭವಾಗಿದೆ. ಪ್ರತಿ ದಿನ ಶಾಲಿನಿ ಜೊತೆಗೆ ಜಗಳ ಮಾಡಲು ಪ್ರಾರಂಭಿಸಿದ್ದಾನೆ. ಮೂರು ಬಾರಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಕೂಡ ಈತ ಪ್ರಯತ್ನಿಸಿದ್ದ.

ಹೀಗಾಗಿ ಜೈಲು ಸೇರಿ ಕೂಡ ಶಿಕ್ಷೆ ಅನುಭವಿಸಿ ಬಂದಿದ್ದಾನೆ. ಈತನ ಉಪಟಳ ಹೆಚ್ಚಾಗುತ್ತಿದ್ದಂತೆ ಶಾಲಿನಿ, ಇವನ ಸಹವಾಸವೇ ಬೇಡ ಎಂದು ವಿಚ್ಛೇದನ ನೀಡಿದ್ದಾರೆ. ಹೀಗಾಗಿ ತಮ್ಮ ಮಕ್ಕಳೊಂದಿಗೆ ತವರು ಮನೆಯಲ್ಲಿಯೇ ವಾಸಿಸಲು ಪ್ರಾರಂಭಿಸಿದ್ದರು. ಜೀವನಕ್ಕಾಗಿ ಗಾರ್ಮೆಂಟ್ ಕೆಲಸಕ್ಕೆ ಹೋಗುತ್ತಿದ್ದರು.

ಇದರಿಂದಾಗಿ ಖಿನ್ನತೆಗೆ ಒಳಗಾಗಿದ್ದ ಸುರೇಶ್, ಶಾಲಿನಿ ಗಾರ್ಮೆಂಟ್ ಕೆಲಸ ಮುಗಿಸಿಕೊಂಡು ಮರಳಿ ಬರುತ್ತಿದ್ದಾಗ ಅವರನ್ನು ಎಳೆದುಕೊಂಡು ಹೋಗಿ ಕತ್ತು ಕುಯ್ದು, ತಲೆಯ ಮೇಲೆ ಕಲ್ಲು ಎಸೆದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಈ ಕುರಿತು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ. ತಬ್ಬಲಿಯಾದ ಮಕ್ಕಳ ಆಕ್ರಂದನ ಮುಗಿಲು ಮುಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...