alex Certify ಪ್ರೀತಿಸುತ್ತಿದ್ದ ಹುಡುಗಿ ಮತ್ತೊಬ್ಬನೊಂದಿಗೆ ಅಡ್ಡಾಡಿದ್ದಕ್ಕೆ ಚೂರಿ ಇರಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೀತಿಸುತ್ತಿದ್ದ ಹುಡುಗಿ ಮತ್ತೊಬ್ಬನೊಂದಿಗೆ ಅಡ್ಡಾಡಿದ್ದಕ್ಕೆ ಚೂರಿ ಇರಿತ

ತಾನು ಪ್ರೀತಿಸುತ್ತಿದ್ದ ಹುಡುಗಿ ಮತ್ತೊಬ್ಬನೊಂದಿಗೆ ಅಡ್ಡಾಡುತ್ತಿದ್ದಾಳೆ ಎಂಬ ಕಾರಣಕ್ಕೆ ಕೋಪಗೊಂಡ ಪ್ರಿಯಕರ ಆಕೆಗೆ ಚಾಕುವಿನಿಂದ ಇರಿದಿರುವ ಘಟನೆ ಕೊಡಗು ಜಿಲ್ಲೆ, ಕುಶಾಲನಗರದಲ್ಲಿ ನಡೆದಿದೆ.

ಘಟನೆಯ ವಿವರ: ಕುಶಾಲನಗರದ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ದೊಡ್ಡಹರವೆ ಗ್ರಾಮದ ವಿಜಯ್ ಎಂಬತಾ ಮಾದಪಟ್ಟಣ ನಿವಾಸಿ ವಿದ್ಯಾರ್ಥಿನಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಇದರ ಜೊತೆಗೆ ಆಕೆ ಮತ್ತೊಬ್ಬ ವಿದ್ಯಾರ್ಥಿಯೊಂದಿಗೆ ಸಲುಗೆಯಿಂದ ಇದ್ದಳು ಎನ್ನಲಾಗಿದೆ.

ಶನಿವಾರದಂದು ವಿದ್ಯಾರ್ಥಿ ಜೊತೆ ಈಕೆ ಕುಶಾಲನಗರದ ಕಾವೇರಿ ನಿಸರ್ಗಧಾಮಕ್ಕೆ ಬಂದಿದ್ದು, ಇವರನ್ನು ಹಿಂಬಾಲಿಸಿಕೊಂಡು ಬಂದಿದ್ದ ವಿಜಯ್ ಚೂರಿಯಿಂದ ಆಕೆಯ ಭುಜ, ಕೈ, ಕುತ್ತಿಗೆ ಭಾಗದಲ್ಲಿ ಇರಿದಿದ್ದಾನೆ. ತಡೆಯಲು ಬಂದಿದ್ದ ವಿದ್ಯಾರ್ಥಿಗೂ ಗಾಯಗಳಾಗಿವೆ. ಇದೀಗ ಪ್ರಕರಣ ದಾಖಲಿಸಿಕೊಂಡಿರುವ ಕುಶಾಲನಗರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...