alex Certify ಪ್ರೇಮಿ ಜೊತೆ ಕೆರೆಗೆ ಹಾರಿ ಪ್ರಾಣಬಿಟ್ಟ ವಿವಾಹಿತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೇಮಿ ಜೊತೆ ಕೆರೆಗೆ ಹಾರಿ ಪ್ರಾಣಬಿಟ್ಟ ವಿವಾಹಿತೆ

ಒಟ್ಟಿಗೆ ಕೆರೆಗೆ ಹಾರಿ ಯುವಕ, ಯುವತಿ ಸಾವಿಗೆ ಶರಣಾಗಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಂಕಿಕೆರೆ ಗ್ರಾಮದಲ್ಲಿ ನಡೆದಿದೆ.

ಬೆಂಗಳೂರು ವಾಸಿ ನಾಗರತ್ನ(21) ಮತ್ತು ಚರಣ್ (22) ಆತ್ಮಹತ್ಯೆ ಮಾಡಿಕೊಂಡಿರೋ ಪ್ರೇಮಿಗಳಾಗಿದ್ಧಾರೆ. ನಿನ್ನೆ ರಾತ್ರಿ ಪಲ್ಸರ್ ಬೈಕ್ನಲ್ಲಿ ಬಂದಿದ್ದ ಯುವಕ-ಯುವತಿ ಕೆರೆಯ ಪಕ್ಕದಲ್ಲಿ ಬೈಕ್ ನಿಲ್ಲಿಸಿ ಕಾಣೆಯಾಗಿದ್ದರು. ಇಂದು ಇಬ್ಬರ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಎಂದು ಸ್ಥಳೀಯರು ಮಾಹಿತಿ ನೀಡಿದ್ಧಾರೆ. ಇಬ್ಬರ ಮೃತದೇಹಗಳನ್ನ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಹೊರ ತೆಗೆದಿದ್ದಾರೆ.

ಘಟನೆ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳೆದ ಎರಡು ವರ್ಷ ಹಿಂದೆಯೇ ಮೃತ ನಾಗರತ್ನ ನಾಪತ್ತೆಯಾಗಿದ್ದ ಬಗ್ಗೆ ಗಂಡ ಪ್ರಸನ್ನಕುಮಾರ್ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಅನ್ನುವ ಮಾಹಿತಿ ಇದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...