alex Certify ‘ಬಗರ್ ಹುಕುಂ’ ಸಾಗುವಳಿ ಮಾಡುತ್ತಿದ್ದ ರೈತರಿಗೆ ಗುಡ್ ನ್ಯೂಸ್; ಅರ್ಜಿ ಸಲ್ಲಿಕೆ ಅವಧಿ ಮತ್ತೊಮ್ಮೆ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಬಗರ್ ಹುಕುಂ’ ಸಾಗುವಳಿ ಮಾಡುತ್ತಿದ್ದ ರೈತರಿಗೆ ಗುಡ್ ನ್ಯೂಸ್; ಅರ್ಜಿ ಸಲ್ಲಿಕೆ ಅವಧಿ ಮತ್ತೊಮ್ಮೆ ವಿಸ್ತರಣೆ

ಬಗರ್ ಹುಕುಂ ಸಾಗುವಳಿ ಮಾಡುತ್ತಿದ್ದ ರೈತರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಗುಡ್ ನ್ಯೂಸ್ ನೀಡಿದೆ. ಅರ್ಜಿ ಸಲ್ಲಿಕೆ ಅವಧಿಯನ್ನು ಇನ್ನೂ ಒಂದು ವರ್ಷಗಳ ಕಾಲ ವಿಸ್ತರಿಸಲಾಗಿದ್ದು, ಇದನ್ನು ಎಲ್ಲ ಪಕ್ಷಗಳ ಸದಸ್ಯರು ಸ್ವಾಗತಿಸಿದ್ದಾರೆ.

ಈ ಮೊದಲು ಸಾಗುವಳಿ ಮಾಡುತ್ತಿದ್ದ ಜಮೀನಿನ ಸಕ್ರಮಕ್ಕೆ ನಮೂನೆ 57 ರಡಿ ಅರ್ಜಿ ಸಲ್ಲಿಸಲು 2018ರ ಮಾರ್ಚ್ 17 ರಿಂದ 2019ರ ಮಾರ್ಚ್ 16 ರವರೆಗೆ ಅವಕಾಶ ಕಲ್ಪಿಸಿಕೊಡಲಾಗಿತ್ತು. ಆದರೆ ಆ ಸಂದರ್ಭದಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾದ ಕಾರಣ 2019ರ ಮಾರ್ಚ್ 10 ರಿಂದ ಅರ್ಜಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ.

ಅವಧಿ ವಿಸ್ತರಣೆಗೆ ಎಲ್ಲ ಪಕ್ಷಗಳ ಶಾಸಕರು ಒತ್ತಾಯಿಸುತ್ತಿದ್ದು, ಹೀಗಾಗಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಲು ಇನ್ನೂ ಒಂದು ವರ್ಷ ಅವಧಿ ವಿಸ್ತರಿಸುವ ಉದ್ದೇಶದ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ಮಸೂದೆ 2022 ರ ಶುಕ್ರವಾರದಂದು ವಿಧಾನಸಭೆಯಲ್ಲಿ ಅಂಗೀಕರಿಸಿದೆ.

ಇದರಿಂದಾಗಿ 2005ರ ಜನವರಿ 1ಕ್ಕೂ ಹಿಂದಿನಿಂದ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ರೈತರು ಇದರ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಈಗ ಇನ್ನೂ ಒಂದು ವರ್ಷಗಳ ಕಾಲ ಅವಕಾಶ ಸಿಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...