alex Certify ಬಜರಂಗದಳ ಹರ್ಷ ಹತ್ಯೆ ಪ್ರಕರಣ: 24 ಗಂಟೆಯೊಳಗೆ 7 ಮಂದಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಜರಂಗದಳ ಹರ್ಷ ಹತ್ಯೆ ಪ್ರಕರಣ: 24 ಗಂಟೆಯೊಳಗೆ 7 ಮಂದಿ ಅರೆಸ್ಟ್

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ 7 ಜನರನ್ನು ಬಂಧಿಸಲಾಗಿದೆ. ಇಬ್ಬರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವುದು ಖಚಿತವಾಗಿದೆ. 12 ಜನರ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಹತ್ಯೆಗೆ ಕಾರಣದ ಬಗ್ಗೆ ಎಸ್ಪಿ, ಐಜಿಪಿ ಜೊತೆ ಚರ್ಚಿಸಿದ್ದೇನೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಮಾಹಿತಿ ನೀಡಿದ್ದಾರೆ.

ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಜನರ ಮೇಲೆ ನಿಗಾ ವಹಿಸಲಾಗಿದೆ. ಮೊದಲು ಪರಿಸ್ಥಿತಿ ಹತೋಟಿಗೆ ಬರಬೇಕಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ಹೇಳಿದ್ದಾರೆ.

ಹಾನಿಗೀಡಾದ ವಾಹನಗಳ ಗುರುತಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Jak se Jak teplota vody Proč semena papriky neklíčí a jak Vědci objevili nejzdravější sacharidy Vepřový jazyk: Tajemství přípravy lahodné lahůdky Odborník na výživu přináší