alex Certify ಬಸ್ ನಲ್ಲಿ ನಿದ್ರೆ ಮಾಡುತ್ತಿದ್ದ ಯುವತಿಗೆ ಮುತ್ತು ನೀಡಿ ಯುವಕ ಪರಾರಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ನಲ್ಲಿ ನಿದ್ರೆ ಮಾಡುತ್ತಿದ್ದ ಯುವತಿಗೆ ಮುತ್ತು ನೀಡಿ ಯುವಕ ಪರಾರಿ…!

ಬಳ್ಳಾರಿಯಿಂದ ಬೆಂಗಳೂರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬರಿಗೆ ಅಪರಿಚಿತ ಯುವಕ ಮುತ್ತು ನೀಡಿ ಪರಾರಿಯಾಗಿರುವ ವಿಚಿತ್ರ ಘಟನೆ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರಿನ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಬಳ್ಳಾರಿಯ ಈ ಯುವತಿ ಗೌರಿ – ಗಣೇಶ ಹಬ್ಬಕ್ಕಾಗಿ ತಮ್ಮ ಊರಿಗೆ ತೆರಳಿದ್ದು, ಸೆಪ್ಟೆಂಬರ್ 13ರಂದು ಸ್ಲೀಪರ್ ಕ್ಲಾಸ್ ಎಸಿ ಬಸ್ ನಲ್ಲಿ ಬೆಂಗಳೂರಿಗೆ ಮರಳಿ ಬರುತ್ತಿದ್ದರು.

ಬೆಳಗಿನ ಜಾವ 5 ಗಂಟೆ ಸಮಯದಲ್ಲಿ ಈ ಬಸ್ ಟಿ ದಾಸರಹಳ್ಳಿ – ಜಾಲಹಳ್ಳಿ ಕ್ರಾಸ್ ಸಂಚರಿಸುವಾಗ ಯುವಕ, ಯುವತಿಗೆ ಮುತ್ತು ನೀಡಿ ಪರಾರಿಯಾಗಿದ್ದಾನೆ. ಏಕಾಏಕಿ ನಡೆದ ಈ ಘಟನೆಯಿಂದ ತಬ್ಬಿಬ್ಬಾದ ಯುವತಿ ಬಳಿಕ ಪೀಣ್ಯ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಘಟನೆ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದರಿಂದ ಪ್ರಕರಣವನ್ನು ಅಲ್ಲಿಗೆ ವರ್ಗಾಯಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...