alex Certify ಬಸ್ ನಿಲ್ದಾಣ ನಿರ್ಮಾಣ ಕುರಿತು ರಾಮದಾಸ್ ಮಹತ್ವದ ಹೇಳಿಕೆ; ಅರಮನೆ ಮಾದರಿಯಲ್ಲಿ ನಿರ್ಮಾಣವಾಗಿದೆ ಹೊರತು ಧರ್ಮದ ಆಧಾರದಲ್ಲಲ್ಲ ಎಂದ ಶಾಸಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ನಿಲ್ದಾಣ ನಿರ್ಮಾಣ ಕುರಿತು ರಾಮದಾಸ್ ಮಹತ್ವದ ಹೇಳಿಕೆ; ಅರಮನೆ ಮಾದರಿಯಲ್ಲಿ ನಿರ್ಮಾಣವಾಗಿದೆ ಹೊರತು ಧರ್ಮದ ಆಧಾರದಲ್ಲಲ್ಲ ಎಂದ ಶಾಸಕರು

ಮೈಸೂರಿನ ಊಟಿ ರಸ್ತೆಯ ಜೆಎಸ್ಎಸ್ ಕಾಲೇಜು ಬಳಿ ನಿರ್ಮಿಸಿರುವ ಬಸ್ ನಿಲ್ದಾಣ, ಗುಂಬಜ್ ಮಾದರಿಯಲ್ಲಿದೆ ಎಂದು ಕಿಡಿ ಕಾರಿದ್ದ ಸಂಸದ ಪ್ರತಾಪ್ ಸಿಂಹ, ಇದನ್ನು ತೆರವುಗೊಳಿಸದಿದ್ದರೆ ನಾನೇ ಈ ಕೆಲಸ ಮಾಡುತ್ತೇನೆ ಎಂದು ಗುಡುಗಿದ್ದರು.

ಅಲ್ಲದೆ ಈ ಮೊದಲು ನಿಲ್ದಾಣದ ಕಟ್ಟಡದ ಮೇಲೆ ಗುಂಬಜ್ ಮಾತ್ರ ಇತ್ತು. ನಾನು ಈ ಕುರಿತು ಹೇಳಿಕೆ ನೀಡಿದ ಬಳಿಕ ಅದರ ಮೇಲೆ ಕಳಶ ಬಂದಿದೆ ಇದು ಹೇಗೆ ಎಂದು ಪ್ರಶ್ನಿಸಿದ್ದ ಪ್ರತಾಪ್ ಸಿಂಹ, ಶಾಸಕ ರಾಮದಾಸ್ ಈ ಕುರಿತು ಮೌನ ವಹಿಸಿದ್ದಾರೆ ಎಂದರೆ ಅವರ ಸಹಮತ ಇದೆ ಎಂದೇ ಅರ್ಥ ಎಂದು ಹೇಳಿದ್ದರು.

ಇದೀಗ ಈ ಕುರಿತಂತೆ ಪ್ರತಿಕ್ರಿಯಿಸಿರುವ ಶಾಸಕ ರಾಮದಾಸ್, ಪಾರಂಪರಿಕ ನಗರಿಯ ಮಹತ್ವ ಸಾರುವ ಸಲುವಾಗಿ ಅರಮನೆ ವಿನ್ಯಾಸದ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸಲಾಗಿದೆ ಹೊರತು ಯಾವುದೇ ಧರ್ಮದ ಆಧಾರದಲ್ಲಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಕಳಶ ರಾತ್ರೋರಾತ್ರಿ ಅಳವಡಿಸಲಾಗಿಲ್ಲ ಕಳೆದ ವಾರವೇ ಇದನ್ನು ಹಾಕಲಾಗಿದೆ ಎಂದು ರಾಮದಾಸ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...