alex Certify ಬಾರದ ಲೋಕಕ್ಕೆ ಪಯಣಿಸಿದ ಸಂಚಾರಿ ವಿಜಯ್; ಮಣ್ಣಲ್ಲಿ ಮಣ್ಣಾದ ರಾಷ್ಟ್ರಪ್ರಶಸ್ತಿ ವಿಜೇತ ನಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾರದ ಲೋಕಕ್ಕೆ ಪಯಣಿಸಿದ ಸಂಚಾರಿ ವಿಜಯ್; ಮಣ್ಣಲ್ಲಿ ಮಣ್ಣಾದ ರಾಷ್ಟ್ರಪ್ರಶಸ್ತಿ ವಿಜೇತ ನಟ

ಚಿಕ್ಕಮಗಳೂರು: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದ ಸ್ಯಾಂಡಲ್ ವುಡ್ ನಟ, ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್(38) ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಪಂಚನಹಳ್ಳಿಯಲ್ಲಿ ನೆರವೇರಿಸಲಾಯಿತು.

ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲುಕಿನ ಪಂಚನಹಳ್ಳಿಯಲ್ಲಿ ವಿಜಯ್ ಸ್ನೇಹಿತ ರಘು ಅವರ ತೋಟದಲ್ಲಿ ಸಂಚಾರಿ ವಿಜಯ್ ಅವರ ಅಂತ್ಯಕ್ರಿಯೆ ನೆರವೇರಿತು. ಕುಪ್ಪೂರು ಯತೀಶ್ವರ ಶಿವಾಚಾರ್ಯ ಶ್ರ‍ಿಗಳ ನೇತೃತ್ವದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಸಹೋದರ ಸಿದ್ದೇಶ್ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು. ಬಳಿಕ ಪೊಲೀಸರಿಂದ ಮೂರು ಸುತ್ತು ಕುಶಲತೋಪು ಹಾರಿಸಿ ಗೌರವ ಸಲ್ಲಿಸಲಾಯಿತು.

ಆಟೋ, ಟ್ಯಾಕ್ಸಿಗಳಿಗೆ ಹೊಸ ಷರತ್ತು; ಅನ್ ಲಾಕ್ ಬೆನ್ನಲ್ಲೇ ಚಾಲಕರಿಗೆ ಮತ್ತೊಂದು ಶಾಕ್

ಗ್ರಾಮಸ್ಥರಿಂದ ಅಂತಿಮ ದರ್ಶನದ ಬಳಿಕ ವಿಜಯ್ ಪಾರ್ಥೀವ ಶರೀರವನ್ನು ಸಮಾಧಿ ಸ್ಥಳದಲ್ಲಿರಿಸಿ ಲಿಂಗಾಯತ ಸಂಪ್ರದಾಯದಂತೆ ಬಿಲ್ವಪತ್ರೆ, ವಿಭೂತಿಗಳನ್ನು ಬಳಸಿ, ಮಣ್ಣಿನಿಂದ ಪಾರ್ಥೀವ ಶರೀರವನ್ನು ಮುಚ್ಚಿ ಅಂತಿಮ ವಿಧಿವಿಧಾನ ನೆರವೇರಿಸಲಾಯಿತು. ಅಂತ್ಯಕ್ರಿಯೆಯಲ್ಲಿ ಸಚಿವ ಮಾಧುಸ್ವಾಮಿ, ಕಡೂರು ಮಾಜಿ ಶಾಸಕ ವೈ ಎಸ್ ವಿ ದತ್ತಾ ಹಾಗೂ ಕುಟುಂಬದ ಆಪ್ತರು, ಊರವರು ಭಾಗಿಯಾಗಿದ್ದರು

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...