alex Certify ಬಿಜೆಪಿಯದ್ದು ತಾಲಿಬಾನ್, ಗೂಂಡಾ ಸಂಸ್ಕೃತಿ; ಜನರ ಸಂಕಷ್ಟದ ವೇಳೆ ಸಚಿವರ ಸಂಭ್ರಮಾಚರಣೆ ವಿಕೃತಿ; ಸರ್ಕಾರದ ವಿರುದ್ಧ ಈಶ್ವರ ಖಂಡ್ರೆ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಯದ್ದು ತಾಲಿಬಾನ್, ಗೂಂಡಾ ಸಂಸ್ಕೃತಿ; ಜನರ ಸಂಕಷ್ಟದ ವೇಳೆ ಸಚಿವರ ಸಂಭ್ರಮಾಚರಣೆ ವಿಕೃತಿ; ಸರ್ಕಾರದ ವಿರುದ್ಧ ಈಶ್ವರ ಖಂಡ್ರೆ ವಾಗ್ದಾಳಿ

ಕಲಬುರ್ಗಿ: ಗಾಳಿಯಲ್ಲಿ ಗುಂಡು ಹಾರಿಸಿ ಕೇಂದ್ರ ಸಚಿವರಿಗೆ ಸ್ವಾಗತ ಕೇಸ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ತಮಗೆ ವಿಶಿಷ್ಠ ಸ್ವಾಗತ ಬೇಕೆಂದು ಸಚಿವ ಸಚಿವ ಭಗವಂತ ಖೂಬಾ ಅವರೇ ಹೀಗೆ ಮಾಡಿಸಿಕೊಂಡಿದ್ದಾರೆ. ಬಿಜೆಪಿ, ರಾಜ್ಯದಲ್ಲಿ ಗೂಂಡಾ ಸಂಸ್ಕೃತಿ ತರಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕಲಬುರ್ಗಿಯಲ್ಲಿ ಮಾತನಾಡಿದ ಖಂಡ್ರೆ, ಬಿಜೆಪಿಯಿಂದ ತಾಲಿಬಾನ್, ಗೂಂಡಾ ಸಂಸ್ಕೃತಿ ಮೆರೆಯಲಾಗುತ್ತಿದೆ. ಕೇಂದ್ರ ಸಚಿವರ ಸ್ವಾಗತಕ್ಕಾಗಿ ಪೊಲೀಸರಿಂದ ಗಾಳಿಯಲ್ಲಿ ಗುಂಡು ಹೊಡೆಸಲಾಗಿದೆ. ಈಗ ಮೇಲಧಿಕಾರಿಗಳು, ಬಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳದೇ ಮೂವರು ಪಿಸಿಗಳನ್ನು ಅಮಾನತು ಮಾಡಿ ಅಮಾಯಕರಿಗೆ ಶಿಕ್ಷೆ ನೀಡಲಾಗಿದೆ. ಜಿಲ್ಲಾಡಳಿತಗಳು ಆಡಳಿತ ಪಕ್ಷದ ಕೈಗೊಂಬೆಗಳಾಗಿವೆ ಎಂದು ಕಿಡಿಕಾರಿದ್ದಾರೆ.

ಕೊರೊನಾ ಸಂಕಷ್ಟದ ನಡುವೆ ಚಿತ್ರರಂಗದಲ್ಲಿ ಹೊಸ ಭರವಸೆ ಹುಟ್ಟು ಹಾಕಿದ ‘ಬೆಲ್​ಬಾಟಂ’….!

ಕೊರೊನಾದಿಂದ ಸಾವಿರಾರು ಜನ ಸಾವನ್ನಪ್ಪಿದ್ದಾರೆ. ಒಂದೆಡೆ ನೆರೆ, ಇನ್ನೊಂದೆಡೆ ಕೋವಿಡ್ ನಿಂದ ಜನರು ಪರಿತಪಿಸುತ್ತಿದ್ದಾರೆ. ಆದರೆ ಬಿಜೆಪಿ ನಾಯಕರು ಸಂಭ್ರಮಾಚರಣೆ ನಡೆಸಿ, ಮಜಾ ಮಾಡುತ್ತಿದ್ದಾರೆ ಸಂಕಷ್ಟದ ನಡುವೆ ಸಂಭ್ರಮಾಚರಣೆ ವಿಕೃತಿ. ರಾಜ್ಯದ ಸಂಸ್ಕೃತಿಗೆ ಕಪ್ಪು ಚುಕ್ಕೆ ಬಳಿಯುವ ಕೆಲಸ ಬಿಜೆಪಿಯಿಂದ ನಡೆಯುತ್ತಿದೆ. ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಆದರೆ ನಿಯಮಗಳನ್ನು ಗಾಳಿಗೆ ತೂರಿ ಸಮಾವೇಶಗಳನ್ನು ನಡೆಸಲಾಗುತ್ತಿದೆ. ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಆಡಳಿತ ಪಕ್ಷಕ್ಕೊಂದು ನ್ಯಾಯ, ಜನಸಾಮಾನ್ಯರಿಗೊಂದು ನ್ಯಾಯವೇ? ಎಂದು ಪ್ರಶ್ನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...