alex Certify ಬಿಜೆಪಿ-ಜೆಡಿಎಸ್ ಹೊಂದಾಣಿಕೆ; ಶೀಘ್ರ ನಿರ್ಧಾರ ಎಂದ ಬಿ ಎಸ್ ವೈ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ-ಜೆಡಿಎಸ್ ಹೊಂದಾಣಿಕೆ; ಶೀಘ್ರ ನಿರ್ಧಾರ ಎಂದ ಬಿ ಎಸ್ ವೈ

ದಾವಣಗೆರೆ: ವಿಧಾನಪರಿಷತ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್, ಬಿಜೆಪಿ ಹೊಂದಾಣಿಕೆ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಪ್ರಕಟಿಸುವುದಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಯಡಿಯೂರಪ್ಪ, ಜೆಡಿಎಸ್ ಜೊತೆ ಹೊಂದಾಣಿಕೆ ಬಗ್ಗೆ ಇಷ್ಟರಲ್ಲಿಯೇ ಮಾತನಾಡುತ್ತೇವೆ. ಪರಸ್ಪರ ಸಹಕಾರ ನೀಡುವಂತೆ ಜೆಡಿಎಸ್ ಬಳಿ ಕೇಳುತ್ತೇವೆ ಎಂದು ಹೇಳುವ ಮೂಲಕ ಜೆಡಿಎಸ್ ಜೊತೆ ಹೊಂದಾಣಿಕೆ ಸುಳಿವು ನೀಡಿದ್ದಾರೆ.

ಪರಿಷತ್ ಚುನಾವಣೆಯಿಂದ ಎರಡನೇ ಸುತ್ತಿನ ಪ್ರಚಾರ ಆರಂಭವಾಗಿದೆ. ರಾಜ್ಯದಲ್ಲಿ ಕೇವಲ 20 ಸೀಟ್ ಗಳಿಗೆ ನಿಶ್ಚಿತವಾಗಿ ಸ್ಪರ್ಧೆ ಮಾಡುತ್ತೇವೆ. ಇದರಲ್ಲಿ 15 ಸೀಟ್ ಗೆದ್ದೇ ಗೆಲ್ಲುತ್ತೇವೆ. ಬಿಜೆಪಿ ಪರವಾದ ವಾತಾವರಣ ಎಲ್ಲೆಡೆ ನಿರ್ಮಾಣವಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ದಯನೀಯ ಸ್ಥಿತಿಯಲ್ಲಿದೆ. ಎಲ್ಲರೂ ಬಿಜೆಪಿಗೆ ಬೆಂಬಲ ನೀಡಿ ಪರಿಷತ್ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲುವಂತೆ ಮಾಡಬೇಕು ಎಂದು ಕರೆ ನೀಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...