alex Certify ಬಿಜೆಪಿ ತೊರೆಯಲಿದ್ದಾರಾ ಜನಾರ್ದನ ರೆಡ್ಡಿ ? ಅಚ್ಚರಿಗೆ ಕಾರಣವಾಗಿದೆ ಈ ಮಾತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ತೊರೆಯಲಿದ್ದಾರಾ ಜನಾರ್ದನ ರೆಡ್ಡಿ ? ಅಚ್ಚರಿಗೆ ಕಾರಣವಾಗಿದೆ ಈ ಮಾತು

ಈ ಮೊದಲು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣಕರ್ತರಾಗಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಬಿಜೆಪಿ ತೊರೆಯಲಿದ್ದಾರಾ ಎಂಬ ಪ್ರಶ್ನೆ ಈಗ ಮೂಡಿದೆ. ಇದಕ್ಕೆ ಕಾರಣವಾಗಿರುವುದು ಸಮಾರಂಭ ಒಂದರಲ್ಲಿ ಅವರು ಆಡಿದ ಮಾತು.

ಹೌದು, ಭಾನುವಾರದಂದು ಬಳ್ಳಾರಿಯ ಈದ್ಗಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಮುಸ್ಲಿಂ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ ವೇಳೆ ಮಾತನಾಡಿದ ಅವರು, ನಾನು ಕಟ್ಟಿ ಬೆಳೆಸಿದ ಬಿಜೆಪಿ ಪಕ್ಷದವರೇ ನನಗೆ ತೊಂದರೆ ಕೊಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ನವರು ನನಗೆ ರಾಜಕೀಯವಾಗಿ ಎದುರಾಳಿಗಳಾಗಿರಬಹುದು. ಅವರ ರಾಜಕೀಯ ಧರ್ಮದಿಂದ ನನಗೆ ತೊಂದರೆ ಆಗಿರಬಹುದು. ಆದರೆ ನಮ್ಮವರೇ ನನಗೆ ಈಗ ತೊಂದರೆ ಕೊಡುತ್ತಿದ್ದಾರೆ ಎಂದು ಜನಾರ್ದನ ರೆಡ್ಡಿ ಕಿಡಿ ಕಾರಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಜನಾರ್ದನ ರೆಡ್ಡಿ ಅವರು ಆಡಿದ ಈ ಮಾತು ಅಚ್ಚರಿಗೆ ಕಾರಣವಾಗಿದೆ. ಅಲ್ಲದೆ ತಾವು ಮುಂದಿನ ದಿನಗಳಲ್ಲಿ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಳ್ಳುವುದಾಗಿ ಜನಾರ್ದನ ರೆಡ್ಡಿ ಹೇಳಿದ್ದು, ಹೀಗಾಗಿ ಬಿಜೆಪಿ ತೊರೆದು ಮತ್ತೊಂದು ಪಕ್ಷ ಸೇರಲಿದ್ದಾರಾ ಎಂಬ ಪ್ರಶ್ನೆ ಈಗ ಮೂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...