alex Certify ಬಿಜೆಪಿ ಪ್ರಜಾಪ್ರಭುತ್ವವನ್ನು ಕೊಂದು ಹಾಕುತ್ತಿದೆ; ಇದಕ್ಕಿಂತ ಕರಾಳ ಘಳಿಗೆ ಎಂದೂ ಬರಲು ಸಾಧ್ಯವಿಲ್ಲ; ವಿಡಿಯೋ ಮೂಲಕ ಕಿಡಿಕಾರಿದ ಕೆ.ಸಿ.ವೇಣುಗೋಪಾಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಪ್ರಜಾಪ್ರಭುತ್ವವನ್ನು ಕೊಂದು ಹಾಕುತ್ತಿದೆ; ಇದಕ್ಕಿಂತ ಕರಾಳ ಘಳಿಗೆ ಎಂದೂ ಬರಲು ಸಾಧ್ಯವಿಲ್ಲ; ವಿಡಿಯೋ ಮೂಲಕ ಕಿಡಿಕಾರಿದ ಕೆ.ಸಿ.ವೇಣುಗೋಪಾಲ್

ನವದೆಹಲಿ: ರಾಹುಲ್ ಗಾಂಧಿ ವಿರುದ್ಧ ಇಡಿ ವಿಚಾರಣೆ ಖಂಡಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಕಾಂಗ್ರೆಸ್ ನಾಯಕರನ್ನು ಪೊಲೀಸರು ಎಳೆದೊಯ್ದಿದ್ದಾರೆ. ಈ ನಡುವೆ ಪೊಲೀಸ್ ಅಧಿಕಾರಿಯೊಬ್ಬರು ಎಐಸಿಸಿ ಕಚೇರಿ ಆವರಣಕ್ಕೆ ನುಗ್ಗಿ, ಕಾರ್ಯಕರ್ತರನ್ನು ಥಳಿಸಿದ್ದಕ್ಕೆ ಕಾಂಗ್ರೆಸ್ ಕಿಡಿಕಾರಿದೆ.

ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ವಿಡಿಯೋ ಹಂಚಿಕೊಂಡು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಓ ಸರ್ವಾಧಿಕಾರಿಯೇ, ನೀವು ನಿಮ್ಮ ಪೊಲೀಸ್ ಗೂಂಡಾಗಳನ್ನು ಕಳುಹಿಸಿ ಕಾಂಗ್ರೆಸ್ ಕಚೇರಿಯನ್ನು ಅಳಿಸಿಹಾಕಲು ಯತ್ನಿಸಿದ್ದೀರಿ. ನಾವು ನಿಮ್ಮ ಅಹಂಕಾರವನ್ನು ಮುರಿಯುತ್ತೇವೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಭಾರತದ ಪ್ರಜಾಪ್ರಭುತ್ವವನ್ನು ಕೊಂದು ಹಾಕುತ್ತಿದೆ. ಎಐಸಿಸಿ ಪ್ರಧಾನ ಕಚೇರಿ ಬಾಗಿಲು ಒಡೆದ ಅವರು ನಮ್ಮ ಪೂರ್ವಜರು ಹೋರಾಡಿ ತಮ್ಮ ಪ್ರಾಣವನ್ನು ಕೊಟ್ಟ ಪ್ರಜಾಪ್ರಭುತ್ವವನ್ನು ತುಳಿದು ಹಾಕಿದ್ದಾರೆ. ಇದಕ್ಕಿಂತ ಕರಾಳ ಘಳಿಗೆ ದೇಶಕ್ಕೆ ಬರಲು ಸಾಧ್ಯವಿಲ್ಲ. ಕಾಂಗ್ರೆಸ್ ಕಚೇರಿಗೆ ಪ್ರವೇಶಿಸಿದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...