alex Certify ಬಿಜೆಪಿ ವಿಜಯೋತ್ಸವದಲ್ಲಿ ಭಾಗಿಯಾದ ಮುಸ್ಲಿಂ ವ್ಯಕ್ತಿ ಕೊಲೆ: ತನಿಖೆಗೆ ಆದೇಶಿಸಿದ ಯುಪಿ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ವಿಜಯೋತ್ಸವದಲ್ಲಿ ಭಾಗಿಯಾದ ಮುಸ್ಲಿಂ ವ್ಯಕ್ತಿ ಕೊಲೆ: ತನಿಖೆಗೆ ಆದೇಶಿಸಿದ ಯುಪಿ ಸಿಎಂ

ಉತ್ತರ ಪ್ರದೇಶದ ಕುಶಿ ನಗರದಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದಕ್ಕಾಗಿ ಮುಸ್ಲಿಂ ವ್ಯಕ್ತಿಯನ್ನು ಹತ್ಯೆಗೈದ ಆರೋಪದ ಅಡಿಯಲ್ಲಿ ತನಿಖೆ ನಡೆಸುವಂತೆ ಸಿಎಂ ಯೋಗಿ ಆದಿತ್ಯನಾಥ್​ ಆದೇಶ ನೀಡಿದ್ದಾರೆ.

ಬಿಜೆಪಿಯ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ ಹಾಗೂ ಇತ್ತೀಚೆಗೆ ನಡೆದ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಬಳಿಕ ವಿಜಯೋತ್ಸವದಲ್ಲಿಯೂ ಭಾಗಿಯಾಗಿದ್ದ ಉತ್ತರ ಪ್ರದೇಶದ ಕುಶಿ ನಗರದ 25 ವರ್ಷದ ಮುಸ್ಲಿಂ ವ್ಯಕ್ತಿ ಬಾಬರ್​ ಅಲಿ ಮೇಲೆ ನೆರೆ ಹೊರೆಯವರು ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಆತ ನಿನ್ನೆ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಾರ್ಚ್​ 20ರಂದು ಬಾಬರ್​ ಅಲಿ ಮೇಲೆ ಕಥರಗರ್ಹಿಯಲ್ಲಿ ಹಲ್ಲೆ ನಡೆಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಬಾಬರ್​ ಅಲಿಯನ್ನು ಲಖನೌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಬರ್​ ನಿನ್ನೆ ಸಾವನ್ನಪ್ಪಿದ್ದ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...