alex Certify ಬಿಜೆಪಿ ವಿರುದ್ಧ ಅಸಾದುದ್ದೀನ್ ಓವೈಸಿ ವಾಗ್ದಾಳಿ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ವಿರುದ್ಧ ಅಸಾದುದ್ದೀನ್ ಓವೈಸಿ ವಾಗ್ದಾಳಿ….!

ವಿಜಯಪುರ- ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಗೆ ಎಐಎಂಐಎಂ ಅಭ್ಯರ್ಥಿಗಳು ಸ್ಪರ್ಧಿಸಿದ ಹಿನ್ನೆಲೆ ಇಂದು ನಗರದಕ್ಕೆ ಓವೈಸಿ ಭೇಟಿ ನೀಡಿ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು. ಈ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಮುಸ್ಲಿಮರ ವಿರುದ್ಧ ಇದೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂದು ಹೇಳುವ ಇವರ ಮಾತು ಭಾಷಣಕ್ಕೆ ಮಾತ್ರ ಸೀಮಿತವಾಗಿದೆ ಎಂದು ಕಿಡಿ ಕಾರಿದರು. ಹಾಗೆಯೇ ಮುಸ್ಲಿಮರ ಗಡ್ಡ, ಊಟ, ಟೋಪಿಗೆ ತೊಂದರೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು. ಇನ್ನು ಹಲಾಲ್ ಕಟ್ ಕುರಿತಂತೆ ಮಾತನಾಡಿದ ಅವರು, ಹಲಾಲ್ ಮಾಂಸದ ಬಗ್ಗೆ ಜನರಿಗೆ ಕೆಟ್ಟ ಅಭಿಪ್ರಾಯ ಬರುವಂತೆ ಮಾಡಿದ್ದಾರೆ ಬಿಜೆಪಿಯವರು.‌ ಇದರಿಂದಲೂ ಅವರಿಗೆ ಕಮಿಷನ್ ಹೋಗುತ್ತಿದೆ. ಈ ಬಗ್ಗೆ ನಮ್ಮ ಬಳಿ ಸಾಕ್ಷ್ಯಗಳು ಇವೆ ಎಂದರು.

ಇನ್ನು ಮುಂಬರುವ ಚುನಾವಣೆಗೆ ಸ್ವತಂತ್ರವಾಗಿ ಸ್ಪರ್ಧೆ ಮಾಡ್ತೀವಿ. ಜೆಡಿಎಸ್ ಜೊತೆ ಮೈತ್ರಿ ಇಲ್ಲ ಎಂದರು. ಇನ್ನು ಬಿಜೆಪಿ ಬಿ ಟೀಂ ನಿಮ್ಮ ಪಕ್ಷ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾರಿಂದಲೂ ನಮಗೆ ಸರ್ಟಿಫಿಕೇಟ್ ಬೇಡ. ಕಾಂಗ್ರೆಸ್ ನ ಈ ಪರಿಸ್ಥಿತಿಗೆ ಸೋನಿಯಾ ಹಾಗೂ ರಾಹುಲ್ ಕಾರಣ. ಬೇರೆ ಬೇರೆ ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಿರೋದು ಗೊತ್ತಲ್ವಾ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...