alex Certify ಬಿಜೆಪಿ ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಸ್ವಪಕ್ಷೀಯ ನಾಯಕ….! ಆಡಳಿತ ವೈಖರಿ ಕುರಿತು ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಸ್ವಪಕ್ಷೀಯ ನಾಯಕ….! ಆಡಳಿತ ವೈಖರಿ ಕುರಿತು ವಾಗ್ದಾಳಿ

ರಾಜ್ಯದ ಆಡಳಿತರೂಢ ಬಿಜೆಪಿ ಸರ್ಕಾರದ ವಿರುದ್ಧ ಸ್ವಪಕ್ಷೀಯ ನಾಯಕನೇ ತಿರುಗಿ ಬಿದ್ದಿದ್ದಾರೆ. ಆಡಳಿತ ವೈಖರಿ ಕುರಿತು ಬಿಜೆಪಿ ವಕ್ತಾರ ಅನ್ವರ್ ಮಾಣಿಪ್ಪಾಡಿ ಕಿಡಿಕಾರಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂವಿಧಾನಬದ್ಧವಾಗಿ ಮುಸ್ಲಿಮರಿಗೆ ಸಿಗಬೇಕಾದ ಹಕ್ಕುಗಳನ್ನು ಕಿತ್ತುಕೊಳ್ಳಲಾಗುತ್ತಿದೆ. ಜಾತ್ರೆ ಸಂದರ್ಭಗಳಲ್ಲಿ ವ್ಯಾಪಾರ ನಡೆಸಲು ಮುಸ್ಲಿಮರಿಗೆ ನಿರ್ಬಂಧಿಸಲಾಗುತ್ತಿದೆ ಎಂದು ಆರೋಪಿಸಿದರು.

ನಾನು ಬಿಜೆಪಿಯಲ್ಲಿ ಇದ್ದೇನೆ ಎಂದ ಮಾತ್ರಕ್ಕೆ ಸತ್ಯವನ್ನು ಮುಚ್ಚಿಡಬೇಕಾಗಿಲ್ಲ ಎಂದು ಹೇಳಿದ ಅವರು, ಈ ಹಿಂದೆ ಎಷ್ಟೇ ದೊಡ್ಡ ಪ್ರಮಾಣದ ಕೋಮು ಗಲಭೆಗಳು ನಡೆದಾಗಲೂ ಸಹ ವ್ಯಾಪಾರದಲ್ಲಿ ಹಿಂದೂ-ಮುಸ್ಲಿಂ ಎಂಬ ತಾರತಮ್ಯ ಮಾಡುತ್ತಿರಲಿಲ್ಲ ಎಂದು ತಿಳಿಸಿದರು.

ಸರ್ಕಾರದ ನಡುವಳಿಕೆಯನ್ನು ಪ್ರತಿಭಟಿಸಿ ನನಗೆ ನೀಡಿರುವ ಗನ್ ಮ್ಯಾನ್ ಭದ್ರತೆ ಹಾಗೂ ಇತರ ಸವಲತ್ತುಗಳನ್ನು ತ್ಯಜಿಸುತ್ತಿದ್ದೇನೆ ಎಂದು ತಿಳಿಸಿದ ಅನ್ವರ್ ಮಾಣಿಪ್ಪಾಡಿ, ವಕ್ಫ್ ಅಸ್ತಿ ರಕ್ಷಣೆಗಾಗಿ ನಾನು ನಡೆಸುತ್ತಿರುವ ಹೋರಾಟವನ್ನು ಕೈಬಿಡುವಂತೆ ಒತ್ತಾಯಿಸಿ ಈ ಹಿಂದೆ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಕೋಟಿಗಟ್ಟಲೆ ಹಣ ನೀಡಲು ಮುಂದಾಗಿದ್ದರು ಎಂಬ ಸ್ಪೋಟಕ ಆರೋಪವನ್ನು ಇದೇ ಸಂದರ್ಭದಲ್ಲಿ ಮಾಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...