alex Certify ಬಿ ಎಸ್ ವೈ ಅವರನ್ನು ಬಿಜೆಪಿಯಲ್ಲಿ ಲೆಕ್ಕಕ್ಕೆ ಇಟ್ಟುಕೊಂಡಿಲ್ಲ-ಡಿಕೆಶಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿ ಎಸ್ ವೈ ಅವರನ್ನು ಬಿಜೆಪಿಯಲ್ಲಿ ಲೆಕ್ಕಕ್ಕೆ ಇಟ್ಟುಕೊಂಡಿಲ್ಲ-ಡಿಕೆಶಿ

ಬೆಂಗಳೂರು: ಬಿಜೆಪಿ ನಾಯಕರ ಆಂತರಿಕ ಭಿನ್ನಮತ ಬೆಂಕಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇನ್ನಷ್ಟು ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ. ಬಿಜೆಪಿಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಲೆಕ್ಕಕ್ಕೇ ಇಟ್ಟುಕೊಂಡಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಬಿಜೆಪಿಯಲ್ಲಿ ಬಿ ಎಸ್ ವೈ ಮಾತ್ರವಲ್ಲ, ಒಬ್ಬರಿಗೊಬ್ಬರು ಕುದಿಯುತ್ತಿದ್ದಾರೆ. ಚುನಾವಣೆ ತನಕ ಬಿ ಎಸ್ ವೈ ಅವರನ್ನು ತಳ್ಳಿಕೊಂಡು ಹೋಗ್ತಿದ್ದಾರೆ ಎಂದು ಹೇಳಿದರು.

ನಿನ್ನೆ ಯಡಿಯೂರಪ್ಪನವರು ಆಡಿದ ಮಾತಿನಲ್ಲೇ ಎಲ್ಲವೂ ಗೊತ್ತಾಗುತ್ತಿದೆ. ಅವರ ನೋವು, ದುಗುಡ ಎಲ್ಲವೂ ವ್ಯಕ್ತವಾಗುತ್ತಿತ್ತು. ಈ ಹಿಂದೆ ಸಚಿವ ಮಾಧುಸ್ವಾಮಿ ಹೇಳಿದ್ದರು ಚುನಾವಣೆವರೆಗೆ ತಳ್ಳುತ್ತಿದ್ದೇವೆ ಎಂದು ಹಾಗೇ ಚುನಾವಣೆವರೆಗೆ ಯಡಿಯೂರಪ್ಪನವರನ್ನು ತಳ್ಳಿಕೊಂಡು ಹೋಗುತ್ತಿದ್ದಾರೆ. ಭಿನ್ನಮತವಿಲ್ಲ ಎಂದು ಹೇಳಿಕೆ ಕೊಡುತ್ತಿದ್ದಾರೆ ಅಷ್ಟೇ ಎಂದು ವಾಗ್ದಾಳಿ ನಡೆಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...