alex Certify ‘ಬೆಂಕಿ’ ಜುಲೈ 15 ರಂದು ರಾಜ್ಯಾದ್ಯಂತ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಬೆಂಕಿ’ ಜುಲೈ 15 ರಂದು ರಾಜ್ಯಾದ್ಯಂತ ಬಿಡುಗಡೆ

ಎ.ಆರ್. ಶಾನ್ ನಿರ್ದೇಶನದ ‘ಬೆಂಕಿ’ ಚಿತ್ರ ಜುಲೈ 15 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಾಯಕ ನಟ ಅನೀಶ್ ಹೇಳಿದರು.

ಅವರು ಇಂದು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಣ್ಣ, ತಂಗಿಯರ ಸಂಬಂಧವನ್ನು ಹೇಳುವ ಹಳ್ಳಿಯ ಸೊಗಡು ಹೊಂದಿರುವ, ಕುಟುಂಬ ಕಲ್ಪನೆ ಇರುವ ವಿಭಿನ್ನ ರೀತಿಯ ವರ್ತಮಾನದ ಸನ್ನಿವೇಶಕ್ಕೆ ಸರಿ ಹೊಂದುವ ಕಥಾಹಂದರವಿರುವ ‘ಬೆಂಕಿ’ ಚಿತ್ರ ಜುಲೈ 15 ರಂದು ಬಿಡುಗಡೆಯಾಗಲಿದ್ದು, ಶಿವಮೊಗ್ಗದ ಜನ ಈ ಸಿನಿಮಾ ನೋಡುವ ಮೂಲಕ ಪ್ರೋತ್ಸಾಹ ನೀಡಬೇಕು ಎಂದರು.

ಈ ಚಿತ್ರದಲ್ಲಿ ನಾಯಕಿಯಾಗಿ ಸಂಪದ ಅಭಿನಯಿಸಿದ್ದು, ಶ್ರುತಿ ಪಾಟೀಲ್ ತಂಗಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪ್ರಮುಖ ಪಾತ್ರಗಳಲ್ಲಿ ಅಚ್ಯುತಕುಮಾರ್, ಉಗ್ರಂ ಮಂಜು, ಹುಲಿ ಕಾರ್ತಿಕ್ ಸೇರಿದಂತೆ ಹಲವರು ಅಭಿನಯಿಸಿದ್ದು, ಕೆ.ವಿ. ರವಿಕುಮಾರ್ ಚಿತ್ರದ ನಿರ್ಮಾಪಕರಾಗಿದ್ದು, ಆನಂದ್ ರಾಜ್ ವಿಕ್ರಂ ಸಂಗೀತ ನೀಡಿದ್ದಾರೆ.

ಮಂಡ್ಯ, ಮೈಸೂರು, ಕೊಳ್ಳೆಗಾಲ ಮುಂತಾದ ಕಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಹಳ್ಳಿಯ ಪರಿಸರವನ್ನು ಇಟ್ಟುಕೊಂಡೇ ಈ ಚಿತ್ರದ ಕತೆಯನ್ನು ಹೆಣೆದಿದ್ದು, ತಾಂತ್ರಿಕ ಅಂಶಗಳು ಚಿತ್ರಕ್ಕೆ ಪೂರಕವಾಗಿವೆ. ಶಿವಮೊಗ್ಗದ ಜನತೆ ನಮ್ಮ ಚಿತ್ರಗಳನ್ನು ಸಂತೋಷದಿಂದ ಸ್ವಾಗತಿಸುತ್ತಾರೆ. ಹಾಗೆಯೇ ಈ ಚಿತ್ರವನ್ನು ಚಿತ್ರಮಂದಿರಕ್ಕೆ ಬಂದು ನೋಡಬೇಕು ಎಂದು ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಪ್ರೊಡಕ್ಷನ್ ವಿಭಾಗದ ಪ್ರಶಾಂತ್ ಇದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...