alex Certify ಬೆಂಗಳೂರಿಗೆ ತಪ್ಪದ ಮಳೆರಾಯನ ಅಬ್ಬರ, ರಾಜ್ಯದಲ್ಲಿ ಮುಂದುವರೆಯಲಿದೆ ಮಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗೆ ತಪ್ಪದ ಮಳೆರಾಯನ ಅಬ್ಬರ, ರಾಜ್ಯದಲ್ಲಿ ಮುಂದುವರೆಯಲಿದೆ ಮಳೆ

ಬೆಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗುತ್ತಿದೆ. ಇಂದು ಸಂಜೆಯಿಂದಲೂ ಮಳೆ ಬರುತ್ತಿದ್ದು ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿದೆ. ಯಾಕಪ್ಪಾ ಮಳೆ ಬರ್ತಾ ಇದೆ ಎಂದು ಜನ ಶಾಪ ಹಾಕುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಇದೀಗ ಇನ್ನೂ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಮಾತ್ರವಲ್ಲದೆ ಸುಮಾರು 18 ಜಿಲ್ಲೆಗಳಲ್ಲಿ ಮಳೆಯಾಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ. ಗುಡುಗು ಸಹಿತ ಮಳೆಯಾಗಲಿದೆ ಎಂದು ಹೇಳುತ್ತಿದೆ.

ಇತ್ತ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಿಂದ ನೆರೆ ಉಂಟಾಗಿದ್ದು, ಇನ್ನೂ ಆ ನೀರು ಹರಿದು ಬೇರೆಡೆಗೆ ಹೋಗುತ್ತಿಲ್ಲ. ಈ ನಡುವೆ ಮತ್ತೆ ಮಳೆ ಬಂದರೆ ಏನು ಮಾಡೋದು ಎಂದು ಗೊತ್ತಿಲ್ಲದ ಸ್ಥಿತಿಯಲ್ಲಿ ಜನ ಇದ್ದಾರೆ. ಭಾನುವಾರದ ವರೆಗೂ ಇದೇ ಪರಿಸ್ಥಿತಿ ಮುಂದುವರೆಯಲಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...