alex Certify ಬೆಂಗಳೂರಿನಲ್ಲಿ 2 ಸಿಡಿ ಕಾರ್ಖಾನೆಗಳಿವೆ; ಶಾಸಕ ಯತ್ನಾಳ್‌ ರಿಂದ ಹೊಸ ಬಾಂಬ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಲ್ಲಿ 2 ಸಿಡಿ ಕಾರ್ಖಾನೆಗಳಿವೆ; ಶಾಸಕ ಯತ್ನಾಳ್‌ ರಿಂದ ಹೊಸ ಬಾಂಬ್

ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಸದಾ ಸುದ್ದಿಯಲ್ಲಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ಈಗ ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ಈಶ್ವರಪ್ಪ ರಾಜೀನಾಮೆ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಸ್ವಯಂ ಪ್ರೇರಿತರಾಗಿ ತನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಾರೆ. ಮಹಾ ಕಳ್ಳ ಮತ್ತು ನಮ್ಮಲ್ಲಿರುವ ಕಳ್ಳ ರಾಜೀನಾಮೆ ನೀಡುವಂತಹ ಇಂತಹ ಷಡ್ಯಂತ್ರಗಳನ್ನು ಸೃಷ್ಟಿ ಮಾಡುತ್ತಿದ್ದಾರೆ. ಸಮಯ ಬಂದಾಗ ಅದನ್ನು ಬಹಿರಂಗಪಡಿಸುತ್ತೇನೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಎರಡು ಸಿಡಿ ಕಾರ್ಖಾನೆಗಳಿವೆ. ಅಲ್ಲಿ ಸಿಡಿ ತಿರುಚುವುದು, ತಯಾರಿಸುವುದು ಎಲ್ಲವೂ ನಡೆಯುತ್ತದೆ. ಆ ಬಳಿಕ ಅಂತವನ್ನು ಬಳಸಿಕೊಂಡು ಬ್ಲಾಕ್‌ ಮೇಲ್‌ ಮಾಡುತ್ತಾರೆ. ಅಂತದೊಂದು ತಂಡವೇ ಕಾರ್ಯ ನಿರ್ವಹಿಸುತ್ತಿದೆ ಎಂದು ಬಸನಗೌಡ ಪಾಟೀಲ್‌ ಯತ್ನಾಳ್‌ ತಿಳಿಸಿದ್ದಾರೆ. ನಮ್ಮಲ್ಲೂ ಒಬ್ಬ ಯುವ ಮಹಾ ನಾಯಕರಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಈಶ್ವರಪ್ಪ ಈ ಪ್ರಕರಣದಲ್ಲಿ ನಿರ್ದೋಷಿಯಾಗಿ ಹೊರ ಬರುವ ವಿಶ್ವಾಸವಿದೆ ಎಂದು ಹೇಳಿದ ಬಸನಗೌಡ ಪಾಟೀಲ್‌ ಯತ್ನಾಳ್‌, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿ ಅಚ್ಚರಿ ಮೂಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...