alex Certify ಬೆಳಗಾವಿಯ ‘ಸುವರ್ಣ ಸೌಧ’ದ ಮುಂದೆ ಶಾವಿಗೆ ಒಣ ಹಾಕಿರುವ ಫೋಟೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳಗಾವಿಯ ‘ಸುವರ್ಣ ಸೌಧ’ದ ಮುಂದೆ ಶಾವಿಗೆ ಒಣ ಹಾಕಿರುವ ಫೋಟೋ ವೈರಲ್

ಬೆಳಗಾವಿಯ ಸುವರ್ಣಸೌಧ ಎದುರು ಶಾವಿಗೆ ಒಣಹಾಕಿದ ಫೋಟೋ ವೈರಲ್ – Public TVಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದ ಜನತೆಗೆ ಅನುಕೂಲವಾಗಲೆಂಬ ಕಾರಣಕ್ಕಾಗಿ ಬೆಳಗಾವಿಯಲ್ಲಿ ವಿಧಾನಸೌಧದ ಮಾದರಿಯಲ್ಲೇ ಸುವರ್ಣಸೌಧ ನಿರ್ಮಿಸಲಾಗಿತ್ತು. ಇಲ್ಲಿ ಅಧಿವೇಶನವೂ ಕೂಡ ನಡೆಸಲಾಗುತ್ತಿದ್ದು, ಆದರೆ ಸುವರ್ಣಸೌಧವನ್ನು ಸಮರ್ಪಕವಾಗಿ ಬಳಸಿಕೊಳ್ಳಲಾಗುತ್ತಿಲ್ಲ ಎಂಬ ದೂರು ಹಲವು ಬಾರಿ ಕೇಳಿಬಂದಿತ್ತು.

ಇದಕ್ಕೆ ಪುಷ್ಟಿ ನೀಡುವಂತೆ ಈಗ ಬೆಳಗಾವಿಯ ಸುವರ್ಣ ಸೌಧದ ಮುಂದೆ ಶಾವಿಗೆ ಒಣ ಹಾಕಿರುವ ಫೋಟೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕವನ್ನು ಸರ್ಕಾರ ಕಡೆಗಣಿಸುತ್ತಿರುವ ಪ್ರತೀಕ ಎಂದು ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ.

ಅಲ್ಲದೆ ಈ ಫೋಟೋಗೆ ಕಾಮೆಂಟ್ ಮಾಡಿದ ಒಬ್ಬರು, ಎರಡನೇ ರಾಜಧಾನಿಯಾದ ಬೆಳಗಾವಿಗೆ ಮಾಡಿದ ಅವಮಾನ ಇದು ಎಂದಿದ್ದಾರಲ್ಲದೆ ಇದರಿಂದಾಗಿ ರಾಜ್ಯ ಸರ್ಕಾರ ನಗೆಪಾಟಲಿಗೀಡಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...