alex Certify ಬೊಮ್ಮಾಯಿ ಸಂಪುಟದಲ್ಲಿ ಕೈತಪ್ಪಿದ ಮಂತ್ರಿ ಹುದ್ದೆ; ಬಿ.ಎಸ್.ವೈ. ಮುಂದೆ ಕಣ್ಣೀರಿಟ್ಟ ರೇಣುಕಾಚಾರ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೊಮ್ಮಾಯಿ ಸಂಪುಟದಲ್ಲಿ ಕೈತಪ್ಪಿದ ಮಂತ್ರಿ ಹುದ್ದೆ; ಬಿ.ಎಸ್.ವೈ. ಮುಂದೆ ಕಣ್ಣೀರಿಟ್ಟ ರೇಣುಕಾಚಾರ್ಯ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನ ಕೈತಪ್ಪಿರುವ ಬೆನ್ನಲ್ಲೇ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾದ ಶಾಸಕ ಎಂ.ಪಿ. ರೇಣುಕಾಚಾರ್ಯ ಕಣ್ಣೀರಿಟ್ಟಿದ್ದಾರೆ.

ಸಚಿವ ಸ್ಥಾನ ಕೈತಪ್ಪುತ್ತಿದ್ದಂತೆ ಕಾವೇರಿ ನಿವಾಸಕ್ಕೆ ತೆರಳಿ ಯಡಿಯೂರಪ್ಪ ಭೇಟಿಯಾದ ರೇಣುಕಾಚಾರ್ಯ, ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು. ಈ ವೇಳೆ ಭಾವುಕರಾದ ರೇಣುಕಾಚಾರ್ಯ ಒಂದು ಹಂತದಲ್ಲಿ ಗದ್ಗದಿತರಾಗಿ ಕಣ್ಣೀರಿಟ್ಟಿದ್ದಾರೆ.

BIG NEWS: ಸಂಸತ್ ಕಲಾಪಕ್ಕೆ ಅಡ್ಡಿ; 6 ಟಿಎಂಸಿ ಸದಸ್ಯರು ಅಮಾನತು

ನಾನು ಪಕ್ಷದ ನಿಷ್ಠಾವಂತ ಶಾಸಕ. ಆದಾಗ್ಯೂ ಸಚಿವ ಸ್ಥಾನ ನೀಡದಿರುವುದಕ್ಕೆ ಬೇಸರ ತಂದಿದೆ ಎಂದಿದ್ದಾರೆ. ಪಕ್ಷ ವಿರೋಧಿಗಳ ವಿರುದ್ಧ ಹೋರಾಡಿದ್ದೇ ತಪ್ಪಾಯಿತೇ ಎಂದು ಭಾವುಕರಾಗಿದ್ದಾರೆ ಎನ್ನಲಾಗಿದೆ. ಈ ವೇಳೆ ಯಡಿಯೂರಪ್ಪ ಮುಂದಿನ ದಿನಗಳಲ್ಲಿ ಒಳ್ಳೆಯ ಅವಕಾಶಗಳು ಸಿಗಲಿವೆ ಎಂದು ಹೇಳಿ ಸಮಾಧಾನಪಡಿಸಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...