alex Certify ಭಕ್ತಿಯಿಂದ ಕೈಮುಗಿದು ದೇವರ ಮೂರ್ತಿಯನ್ನೇ ಕದ್ದೊಯ್ದ ಖತರ್ನಾಕ್ ಕಳ್ಳ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಕ್ತಿಯಿಂದ ಕೈಮುಗಿದು ದೇವರ ಮೂರ್ತಿಯನ್ನೇ ಕದ್ದೊಯ್ದ ಖತರ್ನಾಕ್ ಕಳ್ಳ…!

ಬೆಳಗಾವಿ: ಇತ್ತೀಚಿನ ದಿನಗಳಲ್ಲಿ ಸರಗಳ್ಳತನ, ಮನೆ ದರೋಡೆ ಪ್ರಕರಣಗಳಿಗಂತು ಲೆಕ್ಕವೇ ಇಲ್ಲ….. ದೇವರ ಹುಂಡಿ, ದೇವರಿಗೆ ಹಾಕಿದ್ದ ಆಭರಣಗಳನ್ನು ಕನ್ನ ಹಾಕುವ ಕಳ್ಳರು ಇದೀಗ ದೇವರ ಮೂರ್ತಿಯನ್ನೂ ಬಿಡುತ್ತಿಲ್ಲ.

ಸಾಧಾರಣ ಭಕ್ತನಂತೆ ದೇವಸ್ಥಾನಕ್ಕೆ ಬಂದ ವ್ಯಕ್ತಿಯೊಬ್ಬ ಭಕ್ತಿ-ಭಾವದಿಂದ ದೇವರಿಗೆ ಕೈ ಮುಗಿದು ಮೂರ್ತಿಯನ್ನೇ ಕದ್ದೊಯ್ದಿರುವ ಘಟನೆ ಬೆಳಗಾವಿಯ ಪಾಂಗೋಳ‌ ಗಲ್ಲಿಯ ಅಶ್ವತ್ಥಾಮ ದೇವಸ್ಥಾನದಲ್ಲಿ ನಡೆದಿದೆ.

ದಕ್ಷಿಣ ಭಾರತದ ಏಕೈಕ ಅಶ್ವತ್ಥಾಮ ದೇವಸ್ಥಾನದಲ್ಲಿ ಈ ಕಳ್ಳತನ ನಡೆದಿದೆ. ಮಾಸ್ಕ್ ಧರಿಸಿ ದೇವಾಲಯಕ್ಕೆ ಬಂದ ಕಳ್ಳ ದೇವರಿಗೆ ನಮಿಸಿ ಬಳಿಕ ದೇವರ ಮೂರ್ತಿಯನ್ನೇ ಕದ್ದೊಯ್ದಿದ್ದಾನೆ. ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಸಿಸಿ ಟಿವಿ ಫುಟೇಜ್ ವಶಕ್ಕೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...