alex Certify ಭಜನೆ ಮಾಡುತ್ತಾ ಸುವರ್ಣ ವಿಧಾನಸೌಧಕ್ಕೆ ಬಂದ ಶಾಸಕಿ ಅಂಜಲಿ ನಿಂಬಾಳ್ಕರ್; ಖಾನಾಪುರ ಅಭಿವೃದ್ದಿಗೆ ಕಾಂಗ್ರೆಸ್ ಪಾದಯಾತ್ರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಜನೆ ಮಾಡುತ್ತಾ ಸುವರ್ಣ ವಿಧಾನಸೌಧಕ್ಕೆ ಬಂದ ಶಾಸಕಿ ಅಂಜಲಿ ನಿಂಬಾಳ್ಕರ್; ಖಾನಾಪುರ ಅಭಿವೃದ್ದಿಗೆ ಕಾಂಗ್ರೆಸ್ ಪಾದಯಾತ್ರೆ

ಬೆಳಗಾವಿ: ಖಾನಾಪುರ ಅಭಿವೃದ್ಧಿಗಾಗಿ ಆಗ್ರಹಿಸಿ ಕಾಂಗ್ರೆಸ್ ನಾಯಕರು ಶಾಸಕಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಸುವರ್ಣ ವಿಧಾನಸೌಧ ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು, ಭಜನಾ ತಂಡದ ಜೊತೆ ಸುವರ್ಣಸೌಧದತ್ತ ಆಗಮಿಸಿ ಗಮನ ಸೆಳೆದಿದ್ದಾರೆ.

ಈ ವೇಳೆ ಮಾತನಾಡಿದ ಶಾಸಕ ಅಂಜಲಿ, ಸರ್ಕಾರದ ಕಣ್ಣು, ಕಿವಿ ತೆರೆಯಲು ಭಜನೆ ಮಾಡುತ್ತಿದ್ದೇವೆ. ಸರ್ಕಾರ ಯಾರ ಪರವಿದೆ ಎಂಬುದನ್ನು ಸ್ಪಷ್ಟಪಡಿಸಲಿ. ಬೆಳೆಹಾನಿಗೆ ಪರಿಹಾರ ಸಿಕ್ಕಿಲ್ಲ. ಖಾನಾಪುರ ಕ್ಷೇತ್ರದ ಅಭಿವೃದ್ಧಿಗಾಗಿ ಕೆಲಸ ಮಾಡಬೇಕಿದೆ. ಮೊದಲು ಪರಿಹಾರಗಳನ್ನು ರಾಜ್ಯ ಸರ್ಕಾರ ನೀಡಲಿ ಎಂದು ಒತ್ತಾಯಿಸಿದರು.

ಹೊಸ ವರ್ಷದಲ್ಲಿ ಕಾರು ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಬಿಗ್‌ ಶಾಕ್

ಇಂದಿನಿಂದ ಅಧಿವೇಶನ ಆರಂಭವಾಗುತ್ತಿದ್ದು, ಪಾದಯಾತ್ರೆ ಮೂಲಕ ಅಭಿವೃದ್ಧಿಗೆ ಆಗ್ರಹಿಸಿ ಸರ್ಕಾರದ ಗಮನ ಸೆಳೆಯುತ್ತಿದ್ದೇವೆ ಎಂದರು. ನಿನ್ನೆ ಸಂಜೆಯಿಂದ ಆರಂಭವಾಗಿದ್ದ ಪಾದಯಾತ್ರೆ 40 ಕಿ.ಮೀ ನಡೆದು ಸುವರ್ಣಸೌಧಕ್ಕೆ ಆಗಮಿಸಿದ್ದು, ಪಾದಯಾತ್ರೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಹಾಗೂ ಖಾನಾಪುರ ಜನತೆ ಭಾಗವಹಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...