alex Certify ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಭದ್ರಾ ಎಡದಂಡೆ ಹಾಗೂ ಬಲದಂಡೆ ನಾಲೆಗೆ ನೀರು ಬಿಡುಗಡೆ ದಿನಾಂಕವನ್ನು ಈಗ ವಿಸ್ತರಣೆ ಮಾಡಲಾಗಿದೆ.

ಭದ್ರಾ ಎಡದಂಡೆ ನಾಲೆಗೆ ಜನವರಿ 1 ರಿಂದ ಹಾಗೂ ಬಲದಂಡೆ ನಾಲೆಗೆ ಜನವರಿ 3ರಿಂದ ನೀರನ್ನು ಹರಿಸಲಾಗುತ್ತಿದ್ದು, ಇದೀಗ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಹೆಚ್ಚುವರಿ ದಿನಗಳಿಗೆ ನೀರು ಹರಿಸಲು ಸರ್ಕಾರದ ಅನುಮೋದನೆ ದೊರೆತಿದೆ.

ಈ ಹಿನ್ನೆಲೆಯಲ್ಲಿ ಭದ್ರಾ ಎಡದಂಡೆ ನಾಲೆಯಲ್ಲಿ ಮೇ 12ರ ವರೆಗೆ ಹಾಗೂ ಬಲದಂಡೆ ನಾಲೆಯಲ್ಲಿ ಮೇ 18 ರವರೆಗೆ ಹೆಚ್ಚುವರಿ ನೀರನ್ನು ಹರಿಸಲಾಗುತ್ತದೆ ಎಂದು ತಿಳಿಸಲಾಗಿದ್ದು, ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ರೈತರು ಸಹಕರಿಸಲು ಕೋರಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...