alex Certify ಭಾವಿ ಪತ್ನಿಯೊಂದಿಗೆ ದೇವರ ದರ್ಶನಕ್ಕೆ ತೆರಳಿದ್ದ ಟೆಕ್ಕಿ ಅಪಘಾತದಲ್ಲಿ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾವಿ ಪತ್ನಿಯೊಂದಿಗೆ ದೇವರ ದರ್ಶನಕ್ಕೆ ತೆರಳಿದ್ದ ಟೆಕ್ಕಿ ಅಪಘಾತದಲ್ಲಿ ದುರ್ಮರಣ

ತನ್ನ ಭಾವಿ ಪತ್ನಿಯೊಂದಿಗೆ ದೇವರ ದರ್ಶನಕ್ಕೆ ತೆರಳಿದ್ದ ಟೆಕ್ಕಿಯೊಬ್ಬರು ವಾಪಸ್ ಮರಳುವ ವೇಳೆ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಭರತ್ ಪ್ರಸಾದ್ ಮೃತಪಟ್ಟ ದುರ್ದೈವಿಯಾಗಿದ್ದು, ಇವರ ಭಾವಿ ಪತ್ನಿ ಚೈತ್ರಾ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇವರುಗಳು ಬೆಂಗಳೂರಿನಿಂದ ಮೈಸೂರಿಗೆ ಕಾರಿನಲ್ಲಿ ಬಂದಿದ್ದು, ಚಾಮುಂಡಿ ಬೆಟ್ಟದಲ್ಲಿ ದೇವರ ದರ್ಶನ ಪಡೆದು ವಾಪಸ್ ತೆರಳುತ್ತಿದ್ದರು. ಈ ವೇಳೆ ಕಳಸ್ತವಾಡಿ ಬಳಿ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ ರಸ್ತೆ ವಿಭಜಕ ದಾಟಿ ಇವರ ಕಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಭರತ್ ಮೃತಪಟ್ಟು, ಚೈತ್ರಾ ಗಂಭೀರವಾಗಿ ಗಾಯಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...