alex Certify ಭಾಷಣದ ಮಧ್ಯೆಯೇ ಬಿಜೆಪಿ ಕೇಂದ್ರ ನಾಯಕರಿಗೆ ಯಡಿಯೂರಪ್ಪ ಪರೋಕ್ಷ ಟಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾಷಣದ ಮಧ್ಯೆಯೇ ಬಿಜೆಪಿ ಕೇಂದ್ರ ನಾಯಕರಿಗೆ ಯಡಿಯೂರಪ್ಪ ಪರೋಕ್ಷ ಟಾಂಗ್

ಯಡಿಯೂರಪ್ಪನವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಖಚಿತವಾದಂತಿದೆ. ವಿಧಾನಸೌಧದಲ್ಲಿ ಅವರು ಇಂದು ಭಾಷಣ ಮಾಡುತ್ತಿದ್ದ ವೇಳೆ ಅಧಿಕಾರ ತ್ಯಜಿಸುವ ಪರೋಕ್ಷ ಸೂಚನೆಯನ್ನು ನೀಡಿದ್ದಾರೆ.

ಇದರ ಮಧ್ಯೆ ಅಧಿಕಾರಕ್ಕೇರುವ ಸಂದರ್ಭದಲ್ಲಿ ತಾವು ಎದುರಿಸಬೇಕಾದ ಸವಾಲುಗಳನ್ನೂ ಸಹ ಯಡಿಯೂರಪ್ಪನವರು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಈ ಹಿಂದೆ ಜೆಡಿಎಸ್‌ ಜೊತೆಗೂಡಿ ಸರ್ಕಾರ ರಚಿಸಿದ ವೇಳೆ ತಮಗೆ ಯಾವ ಕಾರಣಕ್ಕೆ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಬೇಕಾಯಿತು ಎಂಬುದನ್ನು ತಿಳಿಸಿದ್ದಾರೆ.

ಇದರ ಮಧ್ಯೆಯೇ ಕೇಂದ್ರದ ಬಿಜೆಪಿ ನಾಯಕರಿಗೂ ಪರೋಕ್ಷವಾಗಿ ಟಾಂಗ್‌ ನೀಡುವ ಮೂಲಕ ಯಡಿಯೂರಪ್ಪ ಅಚ್ಚರಿ ಮೂಡಿಸಿದ್ದಾರೆ. ತಾವು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ತಿಂಗಳುಗಟ್ಟಲೇ ಕೇಂದ್ರ ನಾಯಕರು ಮಂತ್ರಿಮಂಡಲ ರಚಿಸಲು ಅನುಮತಿ ನೀಡದಿದ್ದರೂ ಆ ಸಂದರ್ಭದಲ್ಲಿ ಎದುರಾದ ಎಲ್ಲ ಸಂಕಷ್ಟಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...