alex Certify ಭೀಕರ ಅಪಘಾತ; ಐದು ವರ್ಷದ ಮಗು ಬಲಿ…..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಕರ ಅಪಘಾತ; ಐದು ವರ್ಷದ ಮಗು ಬಲಿ…..!

ಗದಗ : ಕರ್ಫ್ಯೂ ಸಂದರ್ಭದಲ್ಲಿಯೇ ಅಪಘಾತವೊಂದು ಸಂಭವಿಸಿದ್ದು, ಐದು ವರ್ಷದ ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿಯಲ್ಲಿ ನಡೆದಿದ್ದು, ಶಿವಾನಿ ಎಂಬ ಐದು ವರ್ಷದ ಬಾಲಕಿಯೇ ಸಾವನ್ನಪ್ಪಿದ ದುರ್ದೈವಿ. ಅಪಘಾತ ನಡೆಯುತ್ತಿದ್ದಂತೆ ವಾಹನವನ್ನು ಸ್ಥಳದಲ್ಲಿಯೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಈ ಕುರಿತು ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಖಂಡಿಸಿ ಸ್ಥಳೀಯರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಈ ಮಾರ್ಗದಲ್ಲಿ ವೇಗವಾಗಿ ವಾಹನ ಓಡಿಸುತ್ತಿರುವುದೇ ಈ ಘಟನೆಗೆ ಕಾರಣ ಎನ್ನಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...