alex Certify ಭೀಕರ ಕಾರು ಅಪಘಾತಕ್ಕೆ ಕಾಲೇಜು ವಿದ್ಯಾರ್ಥಿನಿಯ ಕಾಲು ಮುರಿತ; ಕಂಗಾಲಾಗಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಕರ ಕಾರು ಅಪಘಾತಕ್ಕೆ ಕಾಲೇಜು ವಿದ್ಯಾರ್ಥಿನಿಯ ಕಾಲು ಮುರಿತ; ಕಂಗಾಲಾಗಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ

ಚಿಕ್ಕಬಳ್ಳಾಪುರ: ಒಂದೇ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಕಾರು ಪರಸ್ಪರ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಓರ್ವ ವಿದ್ಯಾರ್ಥಿನಿಯ ಕಾಲು ಮುರಿದಿದೆ. ಇದರಿಂದ ಭಯಗೊಂಡ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ವಿಕ್ರಮ್ ಕಾಲೇಜಿನ ಬಳಿ ನಡೆದಿದೆ.

ಪ್ಯಾರಾಮೆಡಿಕಲ್ ವಿದ್ಯಾಭ್ಯಾಸ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳ ಕಾರು ಪರಸ್ಪರ ಅಪಘಾತವಾಗಿದ್ದು, ಈ ವೇಳೆ ಚಂದ್ರಿಕಾ ಎಂಬ ವಿದ್ಯಾರ್ಥಿನಿಯ ಕಾಲು ಮುರಿದಿದೆ. ದುರ್ಘಟನೆಗೆ ಬೆದರಿದ ಸಾಗರ್ ಎಂಬ ವಿದ್ಯಾರ್ಥಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

BIG BREAKING: 2002 ರ ಗುಜರಾತ್‌ ಗಲಭೆ; ಮೋದಿಯಯವರಿಗೆ ಕ್ಲೀನ್‌ ಚಿಟ್‌ ನೀಡಿದ್ದ SIT ಕ್ರಮ ಪ್ರಶ್ನಿಸಿದ್ದ ಅರ್ಜಿ ʼಸುಪ್ರೀಂʼ ನಿಂದ ವಜಾ

ಕಾಲು ಮುರಿದುಕೊಂಡಿರುವ ವಿದ್ಯಾರ್ಥಿನಿ ಚಂದ್ರಿಕಾಗೆ ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ ಸಾಗರ್ ನನ್ನು ಹೊಸಕೋಟೆ ಬಳಿಯ ಎಂವಿಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...