alex Certify ‘ಭ್ರಷ್ಟಾಚಾರ’ದ ಕುರಿತು ಪತ್ರ ಬರೆದರೂ ಮೌನಕ್ಕೆ ಶರಣಾದ ಮೋದಿ; ಪ್ರಧಾನಿ ವಿರುದ್ಧ ಕಿಡಿ ಕಾರಿದ ಕಮಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಭ್ರಷ್ಟಾಚಾರ’ದ ಕುರಿತು ಪತ್ರ ಬರೆದರೂ ಮೌನಕ್ಕೆ ಶರಣಾದ ಮೋದಿ; ಪ್ರಧಾನಿ ವಿರುದ್ಧ ಕಿಡಿ ಕಾರಿದ ಕಮಲ್

ಕರ್ನಾಟಕ ಸರ್ಕಾರದ ಭ್ರಷ್ಟಾಚಾರದ ಕುರಿತಂತೆ ಪ್ರಧಾನಿಯವರಿಗೆ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಪತ್ರ ಬರೆದರೂ ಸಹ ಯಾವುದೇ ಉತ್ತರ ನೀಡದೆ ಮೌನಕ್ಕೆ ಶರಣಾಗುವ ಮೂಲಕ ಮೋದಿಯವರು ಇಬ್ಬಗೆ ನೀತಿ ಅನುಸರಿಸುತ್ತಿದ್ದಾರೆ ಎಂದು ನಟ ಕಮಲಹಾಸನ್ ಆರೋಪ ಮಾಡಿದ್ದಾರೆ.

ಭ್ರಷ್ಟಾಚಾರಿಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಹೇಳುವ ನರೇಂದ್ರ ಮೋದಿಯವರು ಅವರದ್ದೇ ಪಕ್ಷದ ಸರ್ಕಾರ ಅಧಿಕಾರದಲ್ಲಿರುವ ಕರ್ನಾಟಕದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದರೂ ಸಹ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಕಮಲಹಾಸನ್ ಕಿಡಿ ಕಾರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಈ ನಡೆ ದ್ವಿಮುಖ ನೀತಿಗೆ ಸಾಕ್ಷಿಯಾಗಿದೆ ಎಂದು ಹೇಳಿರುವ ಕಮಲ ಹಾಸನ್, ಈಗಲಾದರೂ ತಮ್ಮ ಪಕ್ಷ ಅಧಿಕಾರದಲ್ಲಿರುವ ಕರ್ನಾಟಕದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತು ಮೋದಿ ಗಮನ ಹರಿಸಲಿ ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...