alex Certify ಮಕ್ಕಳೊಂದಿಗೆ ಮಹಿಳೆ ನಾಪತ್ತೆಯಾಗಿದ್ದ ಪ್ರಕರಣ ಸುಖಾಂತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳೊಂದಿಗೆ ಮಹಿಳೆ ನಾಪತ್ತೆಯಾಗಿದ್ದ ಪ್ರಕರಣ ಸುಖಾಂತ್ಯ

Missing cases on the rise in Telanganaತನ್ನ ಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆಯಾಗಿದ್ದ ಪ್ರಕರಣ ಈಗ ಸುಖಾಂತ್ಯ ಕಂಡಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯತ್ ವ್ಯಾಪ್ತಿ ವಿದ್ಯಾನಗರ ನಿವಾಸಿ ಮಹಿಳೆ ಹಾಗೂ ಮಕ್ಕಳು ಈಗ ಉಡುಪಿಯಲ್ಲಿ ಪತ್ತೆಯಾಗಿದ್ದಾರೆ.

ಸೆಪ್ಟೆಂಬರ್ 12ರಂದು ಸೌಂದರ್ಯ ಎಂಬ ಈ ಮಹಿಳೆ ತಮ್ಮ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದು, ತನ್ನ ಪೋಷಕರಿಗೆ ಕರೆ ಮಾಡಿ ಪತಿ ಸುಧಾರಣೆ ಆಗುತ್ತಿಲ್ಲ. ಹೀಗಾಗಿ ನಾವುಗಳು ಸಾಯುತ್ತಿದ್ದೇವೆ ಎಂದು ಕರೆ ಮಾಡಿದ್ದ ಕಾರಣ ಆತಂಕ ಮನೆ ಮಾಡಿತ್ತು.

ಇದೀಗ ಎಲ್ಲರೂ ಉಡುಪಿಯಲ್ಲಿ ಪತ್ತೆಯಾಗಿದ್ದು, ಮದ್ಯಪಾನದ ದಾಸನಾಗಿದ್ದ ಸೌಂದರ್ಯ ಪತಿ ಶಶಿಕುಮಾರ್, ಇವರುಗಳಿಗೆ ಇನ್ನಿಲ್ಲದಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮನೆ ಬಿಟ್ಟು ಹೋಗಿದ್ದ ಇವರುಗಳು ಇದೀಗ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...