alex Certify ಮಠಾಧೀಶರ ರಕ್ಷಣೆಗೆ ಕಾಯ್ದೆ ರೂಪಿಸುವಂತೆ ಮುರುಘಾ ಮಠದ ಬಸವಪ್ರಭು ಸ್ವಾಮೀಜಿ ಒತ್ತಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಠಾಧೀಶರ ರಕ್ಷಣೆಗೆ ಕಾಯ್ದೆ ರೂಪಿಸುವಂತೆ ಮುರುಘಾ ಮಠದ ಬಸವಪ್ರಭು ಸ್ವಾಮೀಜಿ ಒತ್ತಾಯ

ಪ್ರಸ್ತುತ ದಿನಗಳಲ್ಲಿ ಪೋಕ್ಸೋ ಸೇರಿದಂತೆ ಹಲವು ಕಾನೂನುಗಳನ್ನು ದುರ್ಬಳಕೆ ಮಾಡಿಕೊಂಡು ಮಠಾಧೀಶರ ಹಕ್ಕಿಗೆ ಚ್ಯುತಿ ಉಂಟು ಮಾಡಲಾಗುತ್ತಿದೆ. ಹೀಗಾಗಿ ಮಠಾಧೀಶರ ರಕ್ಷಣೆಗೆ ಸರ್ಕಾರ ಸೂಕ್ತ ಕಾಯ್ದೆ ರೂಪಿಸಬೇಕು ಎಂದು ಚಿತ್ರದುರ್ಗ ಮುರುಘಾ ಮಠದ ಉಸ್ತುವಾರಿಯಾಗಿದ್ದ ಬಸವಪ್ರಭು ಸ್ವಾಮೀಜಿ ಒತ್ತಾಯಿಸಿದ್ದಾರೆ.

ಮಂಗಳವಾರದಂದು ಮುರುಘಾ ಮಠದಲ್ಲಿ ನಡೆಸಲಾದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಯ್ದೆ ಮೂಲಕ ಮಠಾಧೀಶರ ರಕ್ಷಣೆಯಾಗದಿದ್ದರೆ ಮುಂದಿನ ದಿನಗಳಲ್ಲಿ ಯಾರೂ ಸಹ ಮಠಾಧೀಶರ ಪಟ್ಟಕ್ಕೆ ಏರಲು ಬಯಸುವುದಿಲ್ಲ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಚಿತ್ರದುರ್ಗ ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಿಸಿರುವ ಕುರಿತಂತೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ ಅವರು, ಈ ಹಿಂದೆ ರಾಮಚಂದ್ರಾ ಪುರ ಮಠ ಸಹ ಇಂತವುದೇ ಪರಿಸ್ಥಿತಿ ಎದುರಿಸಿತ್ತು. ಆದರೆ ಆಗ ಆಡಳಿತಾಧಿಕಾರಿ ನೇಮಕ ಮಾಡದ ಸರ್ಕಾರ ಮುರುಘಾ ಮಠದ ವಿಷಯದಲ್ಲಿ ಭಿನ್ನ ನಿಲವು ತೆಗೆದುಕೊಂಡಿದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...