alex Certify ಮತ್ತು ಬರುವ ಔಷಧಿ ನೀಡಿ ಬುದ್ಧಿ ಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಪಾಪಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತು ಬರುವ ಔಷಧಿ ನೀಡಿ ಬುದ್ಧಿ ಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಪಾಪಿಗಳು

ದಾವಣಗೆರೆ : 25 ವರ್ಷದ ಬುದ್ಧಿಮಾಂದ್ಯ ಮಹಿಳೆಯೊಬ್ಬರ ಮೇಲೆ ಪಾಪಿಗಳಿಬ್ಬರು ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದ್ದು, ಸದ್ಯ ಮಹಿಳೆಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಈ ಘಟನೆ ತಾಲೂಕಿನ ಮ್ಯಾಸರಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಬುದ್ಧಿಮಾಂದ್ಯ ವಿವಾಹಿತ ಮಹಿಳೆ ತೊಗರಿ ಹೊಲದಲ್ಲಿ ಕೆಲಸ ಮಾಡುತ್ತಿದ್ದರು. ಅವರಿಗೆ ಮತ್ತು ಬರುವ ಔಷಧ ನೀಡಿ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

25 ವರ್ಷದ ಮಹಿಳೆ ತೊಗರಿ ಹೊಲದಲ್ಲಿ ಅರೆ ಪ್ರಜ್ಞೆ ಸ್ಥಿತಿಯಲ್ಲಿ ಇದ್ದದ್ದನ್ನು ಕಂಡಾಗ ಈ ಘಟನೆ ಬೆಳಕಿಗೆ ಬಂದಿದೆ. ಅದೇ ಗ್ರಾಮದ ಪ್ರಭು ಹಾಗೂ ಕುಂದುವಾಡದ ಕಿರಣ್ ಎಂಬುವವರೇ ಅತ್ಯಾಚಾರ ಮಾಡಿದ್ದಾರೆ ಎಂದು ತಿಳಿದು ಬಂದಿದ್ದು, ಸದ್ಯ ಪ್ರಭುನನ್ನು ಪೊಲೀಸರು ಬಂಧಿಸಿದ್ದಾರೆ. ಕರಿಣ್ ತಲೆ ಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಈ ಕುರಿತು ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...