alex Certify ಮತ್ತೊಮ್ಮೆ ‌ʼಮಾನವೀಯತೆʼ ಮೆರೆದು ಎಲ್ಲರ ಹೃದಯ ಗೆದ್ದ ಸೋನು ಸೂದ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಮ್ಮೆ ‌ʼಮಾನವೀಯತೆʼ ಮೆರೆದು ಎಲ್ಲರ ಹೃದಯ ಗೆದ್ದ ಸೋನು ಸೂದ್

ಕೋವಿಡ್​ 19 ಸಾಂಕ್ರಾಮಿಕದ ಸಂದರ್ಭದಲ್ಲಿ ಬಾಲಿವುಡ್ ನಟ ಸೋನು ಸೂದ್​ ತಮ್ಮ ಮಾನವೀಯ ಕಾರ್ಯಗಳ ಮೂಲಕವೇ ದೊಡ್ಡ ಮಟ್ಟದಲ್ಲಿ ಪ್ರಶಂಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.

ಇದೀಗ ತಮ್ಮ ಸಾಮಾಜಿಕ ಕಾರ್ಯಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಪಂಜಾಬ್​ನಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲು ಮಾಡಲು ಸಹಾಯ ಮಾಡಿದ್ದಾರೆ. ಅಲ್ಲದೇ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಪಡೆಯಲು ಸಹಾಯ ಕೂಡ ಮಾಡಿದ್ದಾರೆ ಎಂದು ವರದಿಯಾಗಿದೆ. ಈ ಸಂಬಂಧ ಸೋಶಿಯಲ್​ ಮೀಡಿಯಾದಲ್ಲಿ ಸೋನು ಸೂದ್​​ರ ಮಾನವೀಯ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.

ಟ್ವಿಟರ್​ನಲ್ಲಿ ಶೇರ್​ ಮಾಡಲಾಗುತ್ತಿರುವ ವಿಡಿಯೋದಲ್ಲಿ ಗಾಯಗೊಂಡಿದ್ದ ಯುವಕನನ್ನು ಸೋನು ಸೂದ್​ ಆಸ್ಪತ್ರೆಗೆ ಎತ್ತಿಕೊಂಡು ಹೋಗುತ್ತಿರುವುದನ್ನು ಕಾಣಬಹುದಾಗಿದೆ.

ಆಸ್ಪತ್ರೆಯಲ್ಲಿ ಯುವಕನಿಗೆ ಸಕಾಲದಲ್ಲಿ ವೈದ್ಯಕೀಯ ಚಿಕಿತ್ಸೆ ನೀಡಲಾಗಿದ್ದು ಆತ ಆರೋಗ್ಯವಾಗಿದ್ದಾನೆ ಎನ್ನಲಾಗಿದೆ. ಸೋನು ಸೂದ್​ ಕೊರೊನಾ ಎರಡನೆ ಅಲೆಯ ಸಂದರ್ಭದಲ್ಲಿಯೂ ಕೋವಿಡ್ 19 ವಿರುದ್ಧ ಹೋರಾಡುತ್ತಿದ್ದ ದೇಶದ ಜನತೆಗೆ ಅನೇಕ ರೀತಿಯಲ್ಲಿ ಸಹಾಯ ಮಾಡಿದ್ದರು.

— Sood Charity Foundation (@SoodFoundation) February 9, 2022

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...