alex Certify ಮತ ಎಣಿಕೆಗೂ ಮುನ್ನ ಅಭ್ಯರ್ಥಿಗಳಿಂದ ದೇಗುಲಗಳಿಗೆ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ ಎಣಿಕೆಗೂ ಮುನ್ನ ಅಭ್ಯರ್ಥಿಗಳಿಂದ ದೇಗುಲಗಳಿಗೆ ಭೇಟಿ

ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದ್ದು, ಕೆಲ ಹೊತ್ತಿನಲ್ಲೇ ಮತ ಎಣಿಕೆ ಕಾರ್ಯ ನಡೆಯಲಿದೆ. ಬಹುತೇಕ ಇಂದು ಸಂಜೆಯೊಳಗಾಗಿ ಫಲಿತಾಂಶ ಹೊರ ಬೀಳಲಿದ್ದು, ಯಾವ್ಯಾವ ರಾಜ್ಯಗಳಲ್ಲಿ ಯಾವ ಪಕ್ಷ ಅಧಿಕಾರ ಹಿಡಿಯಲಿದೆ ಎಂಬುದರ ಚಿತ್ರಣ ತಿಳಿಯಲಿದೆ.

ಇದರ ಮಧ್ಯೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು ತಮ್ಮ ಗೆಲುವಿಗಾಗಿ ಪ್ರಾರ್ಥಿಸಿ ದೇಗುಲಗಳಿಗೆ ಭೇಟಿ ನೀಡುತ್ತಿದ್ದಾರೆ. ಪಂಜಾಬ್‌ ಮುಖ್ಯಮಂತ್ರಿ ಚೆನ್ನಿ ಗುರುದ್ವಾರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಮತದಾನದ ಬಳಿಕ ನಿದ್ರೆಯಿಲ್ಲದ ರಾತ್ರಿಗಳನ್ನು ಕಳೆದಿರುವ ಅಭ್ಯರ್ಥಿಗಳು, ಯಾವ ಬೂತ್‌ ಗಳಲ್ಲಿ ತಮಗೆಷ್ಟು ಮತಗಳು ಲಭಿಸಿರಬಹುದೆಂಬ ಆಧಾರದ ಮೇಲೆ ಫಲಿತಾಂಶದ ಲೆಕ್ಕಾಚಾರ ಹಾಕುತ್ತಿದ್ದಾರೆ. ಅಂತಿಮವಾಗಿ ಮತದಾರ ಪ್ರಭು ಯಾರ ಕೈ ಹಿಡಿದಿದ್ದಾನೆ ಎಂಬುದು ಇನ್ನು ಕೆಲ ಹೊತ್ತಿನಲ್ಲೇ ಬಹಿರಂಗವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...