alex Certify ಮದುವೆಯಾದ ದಿನವೇ ಹೃದಯಾಘಾತಕ್ಕೆ ಬಲಿಯಾದ ವರ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆಯಾದ ದಿನವೇ ಹೃದಯಾಘಾತಕ್ಕೆ ಬಲಿಯಾದ ವರ…!

ಮದುವೆಯಾದ ದಿನವೇ ವರ ಹೃದಯಾಘಾತಕ್ಕೆ ಬಲಿಯಾಗಿರುವ ದಾರುಣ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಶ್ಯಾಡಂಬಿ ಗ್ರಾಮದಲ್ಲಿ ನಡೆದಿದೆ.

ಶ್ಯಾಡಂಬಿಯ ಬಿಎ.ಬಿಇಡಿ ಪದವೀಧರ 35 ವರ್ಷದ ಶಿವಾನಂದ ಶೇಖಪ್ಪ ಸುಣಗಾರ ಸಾವನ್ನಪ್ಪಿದವರಾಗಿದ್ದು, ಮಂಗಳವಾರ ಮಧ್ಯಾಹ್ನ ಸಪ್ತಪದಿ ತುಳಿದಿದ್ದರು.

ವಧು-ವರನ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದ್ದರ ಮಧ್ಯೆ ಅಂದು ರಾತ್ರಿ 10 ಗಂಟೆ ಸುಮಾರಿಗೆ ಶಿವಾನಂದ ಅವರಿಗೆ ಹೃದಯಾಘಾತವಾಗಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇದೀಗ ಉಭಯ ಕುಟುಂಬಗಳಲ್ಲಿ ಶೋಕ ಮಡುಗಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...